News Kannada
Monday, March 20 2023

ಕರಾವಳಿ

ಕಾರ್ಕಳ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ: 40 ಲೋಡ್ ಅಕ್ರಮ ಮರಳು ವಶಕ್ಕೆ

Photo Credit :

ಕಾರ್ಕಳ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ: 40 ಲೋಡ್ ಅಕ್ರಮ ಮರಳು ವಶಕ್ಕೆ

ಕಾರ್ಕಳ: ತಾಲೂಕು ವ್ಯಾಪ್ತಿಯಲ್ಲಿ ಕಪ್ಪು, ಕೆಂಪು ಕಲ್ಲುಗಳ, ಮರಳು ಹಾಗೂ ಟಿಂಬರ್ ಗಳ ಅಕ್ರಮ ದಂಧೆಗಳು ಎಗ್ಗಿಲ್ಲದೇ ನಡೆಯುತ್ತಿದ್ದು ಇದರಿಂದ ಪ್ರಾಕೃತಿಕ ಸಂಪತ್ತು ಲೂಟಿಯಾಗಿ ಸರಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂ. ನಷ್ಟವಾಗುತ್ತಿರುವ ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿರುವ ನಡುವೆ ಬೋಳ ಬರಬೈಲು ಶಾಂಭವಿ ನದಿಯಲ್ಲಿ ಕಳೆದ ಹಲವು ದಿನಗಳಲ್ಲಿ ನಡೆಯುತ್ತಿದ್ದ ಅಕ್ರಮ ಮರುಳುಗಾರಿಕೆ. ಶಾಂಭವಿ ನದಿಯಲ್ಲಿನ ಮರಳು ತೆಗೆದು ಬರಬೈಲು ಎಂಬಲ್ಲಿ ಕಾರ್ಕಳ ತಹಶೀಲ್ದಾರ್ ಗುರುಪ್ರಸಾದ್ ನೇತೃತ್ವದಲ್ಲಿ ಅಕ್ರಮ ಮರಳು ಅಡ್ಡೆಗೆ ದಾಳಿಸಿದ್ದಾರೆ.

2 ಕಡೆಯಲ್ಲಿ ಸುಮಾರು 40 ಕ್ಕೂ ಹೆಚ್ಚು ಲೋಡು ಮರಳು ಸಂಗ್ರಹಿಸಲಾಗಿತ್ತು. ಅದರ ಅಂದಾಜು ಮೌಲ್ಯ 4 ಲಕ್ಷ ಎಂದು ತಿಳಿದುಬಂದಿದೆ. ಪತ್ತೆಯಾದ ಸೊತ್ತನ್ನು ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಲಾಗಿದೆ.

ಪ್ರಕರಣದ ಆರೋಪಿ ಪಕ್ಷದ ಮುಖಂಡ?!:
ಮರಳು ದಂಧೆಯಲ್ಲಿ ತೊಡಗಿರುವ ವ್ಯಕ್ತಿ ರಾಷ್ಟ್ರೀಯ ಪಕ್ಷವೊಂದರ ಮುಖಂಡನಾಗಿದ್ದು, ನಿಕಟಪೂರ್ವ ಜನಪ್ರತಿ ಎಂಬುವುದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ. ಆರೋಪಿಗಳ ಹೆಸರನ್ನು ಹೇಳಲಿಚ್ಚಿಸದ ಅಧಿಕಾರಿಗಳು ಅಕ್ರಮ ಮರಳು ಸಂಗ್ರಹಿಸಿಟ್ಟ ಜಾಗದ ವಾರಸುದಾರರು, ಕೂಡಿಟ್ಟವರು ಯಾರೆಂಬ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ. ಆ ಕುರಿತು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ತನಿಖೆ ನೀಡಿ ವರದಿ ಬಂದ ಬಳಿಕ ನೈಜ ಆರೋಪ ಪತ್ತೆಯಾಗಲಿದೆ ಎಂದು ತಹಶೀಲ್ದಾರ್ ಟಿ.ಜಿ ಗುರುಪ್ರಸಾದ್ ಪತ್ರಿಕೆಗೆ ತಿಳಿಸಿದ್ದಾರೆ.

 

See also  24ಕ್ಕೂ ಅಧಿಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಅಂತರಾಜ್ಯ ಕಳ್ಳರ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು