News Kannada
Friday, March 31 2023

ಕರಾವಳಿ

ಮೊಗಪ್ಪೆ ಕೆರೆಯ ಅಭಿವೃದ್ಧಿಗೆ ಚಾಲನೆ

Photo Credit :

ಮೊಗಪ್ಪೆ ಕೆರೆಯ ಅಭಿವೃದ್ಧಿಗೆ ಚಾಲನೆ

ಸುಳ್ಯ: ಬೆಳ್ಳಾರೆ ಸಮೀಪದ ನೆಟ್ಟಾರಿನ ಮೊಗಪ್ಪೆ ಕೆರೆಯ ಅಭಿವೃದ್ಧಿಗೆ ಮಂಗಳವಾರ ಚಾಲನೆ ನೀಡಲಾಯಿತು. ಹಿರಿಯ ಕೃಷಿಕರಾದ ಕೆ.ಸುಬ್ಬರಾವ್ ಕುತ್ಯಾಡಿ ತೆಂಗಿನ ಕಾಯಿ ಒಡೆಯುವುದರ ಮೂಲಕ ಶತಮಾನದ ಇತಿಹಾಸವಿರುವ 10 ಎಕ್ರೆ ವಿಸ್ತೀರ್ಣದಲ್ಲಿ ಹರಡಿರುವ ಕೆರೆಯ ಅಭಿವೃದ್ಧಿಗೆ ಚಾಲನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಎಸ್.ಎನ್.ಮನ್ಮಥ, ಬೆಳ್ಳಾರೆ ಗ್ರಾ.ಪಂ.ಅಧ್ಯಕ್ಷೆ ಶಕುಂತಳಾ ನಾಗರಾಜ್, ಪೆರುವಾಜೆ ಗ್ರಾ.ಪಂ.ಅಧ್ಯಕ್ಷೆ ಅನುಸೂಯ, ಬೆಳ್ಳಾರೆ ಗ್ರಾ.ಪಂ.ಉಪಾಧ್ಯಕ್ಷ ಎನ್.ಎಸ್.ಡಿ ವಿಠಲದಾಸ್, ಜಿ.ಪಂ.ಮಾಜಿ ಸದಸ್ಯ ಚಂದ್ರಶೇಖರ ಕಾಮತ್, ಪ್ರಮುಖರಾದ ಸುಬ್ರಹ್ಮಣ್ಯ ಜೋಷಿ, ಸುರೇಶ್ಕುಮಾರ್ ಶೆಟ್ಟಿ, ಸತ್ಯನಾರಾಯಣ ಕೋಡಿಬೈಲು, ಮಾಧವ ಗೌಡ ಕಾಮಧೇನು, ಕುಶಾಲಪ್ಪ ಪೆರುವಾಜೆ, ಮೋನಪ್ಪ ತಂಬಿನಮಕ್ಕಿ, ಪ್ರಸಾದ್ ಸೇವಿತ, ದಿಲೀಪ್, ಪ್ರವೀಣ್, ವಾಸು ನೆಟ್ಟಾರು, ಮುಂಡಪ್ಪ ಗೌಡ, ಪ್ರೇಮನಾಥ ಶೆಟ್ಟಿ, ಪ್ರಭಾಕರ ಆಳ್ವ, ರಾಮಚಂದ್ರ ಭಟ್ ಮೊಗಪ್ಪೆ, ಪದ್ಮನಾಭ ಬೀಡು ಮತ್ತಿತರರು ಉಪಸ್ಥಿತರಿದ್ದರು.

ಪಿಲಿಕುಳ ಮಾದರಿಯಲ್ಲಿ ಅಭಿವೃದ್ಧಿ:
ಪ್ರಥಮ ಹಂತದಲ್ಲಿ ಮೊಗಪ್ಪೆ ಕೆರೆಯಲ್ಲಿ ತುಂಬಿರುವ ಹೋಳನ್ನು 15 ಅಡಿ ಆಳಕ್ಕೆ ತೆಗೆದು ಅದನ್ನು ಸ್ವಚ್ಛಗೊಳಿಸಲಾಗುವುದು. ಮುಂದಿನ ದಿನಗಳಲ್ಲಿ ಕೆರೆಯನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸಿ ಹಳೆಯ ವೈಭವವನ್ನು ಮರಳಿ ಸ್ಥಾಪಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಎಸ್.ಎನ್.ಮನ್ಮಥ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಪಿಲಿಕುಳ ಮಾದರಿಯಲ್ಲಿ ಕೆರೆಯನ್ನು ಅಭಿವೃದ್ಧಿ ಪಡಿಸಿ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು. ಕೆರೆಯಿಂದ ಬೆಳ್ಳಾರೆ, ಪೆರುವಾಜೆ ಮತ್ತಿತರ ಕಡೆಗಳಿಗೆ ನೀರು ಸರಬರಾಜು ಮಾಡುವುದರ ಜೊತೆಗೆ ಕೆರೆಯಲ್ಲಿ ಬೋಟಿಂಗ್, ಕಾರಂಜಿ, ಬದಿಯಲ್ಲಿ ಗಾರ್ಡನ್, ರೆಸಾರ್ಟ್ ಗಳನ್ನು ಸ್ಥಾಪಿಸಿ ಮೂಲಕ ಆಕರ್ಷಕ ತಾಣವನ್ನಾಗಿ ಮಾಡುವ ಯೋಚನೆ ಇದೆ ಎಂದು ಅವರು ತಿಳಿಸಿದರು. ಬೆಳ್ಳಾರೆ ಗ್ರಾಮದ ನೆಟಾರು ಮೊಗಪ್ಪೆ ಕೆರೆ ಅಭಿವೃದ್ಧಿ ಸಮಿತಿಯನ್ನು ರಚಿಸಲಾಗಿದ್ದು ಸಮಿತಿಯ ನೇತೃತ್ವದಲ್ಲಿ ಕೆರೆಯ ಅಭಿವೃದ್ಧಿ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರ, ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಜೆಸಿಬಿ, ಹಿಟಾಚಿ ಬಳಸಿ ಅಭಿವೃದ್ಧಿ ಕಾರ್ಯ ನಡೆಸಲಾಗುತ್ತಿದ್ದು ಈಗಾಗಲೇ 300 ಗಂಟೆಗಳ ಕೆಲಸಕ್ಕೆ ನೋಂದಣಿ ಆಗಿದೆ ಎಂದು ಅವರು ತಿಳಿಸಿದರು.

See also  ಒಮ್ನಿ ವ್ಯಾನ್ ಗೆ ಕೆಎಸ್ ಆರ್ ಟಿಸಿ ಬಸ್ಸು ಡಿಕ್ಕಿ: ಓರ್ವ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು