News Kannada
Thursday, March 23 2023

ಕರಾವಳಿ

ಬಿಜೆಪಿಯ ವಿರುದ್ಧ ಧರ್ಮ ಎತ್ತಿ ಕಟ್ಟುವ ಉದ್ದೇಶ ಕಾಂಗ್ರೆಸ್ಸಿಗಿಲ್ಲ: ಶಶಿಧರ್ ಹೆಗ್ಡೆ

Photo Credit :

ಬಿಜೆಪಿಯ ವಿರುದ್ಧ ಧರ್ಮ ಎತ್ತಿ ಕಟ್ಟುವ ಉದ್ದೇಶ ಕಾಂಗ್ರೆಸ್ಸಿಗಿಲ್ಲ: ಶಶಿಧರ್ ಹೆಗ್ಡೆ

ಮಂಗಳೂರು: ಬಿಜೆಪಿ ಹಾಗೂ ಸಂಘಟನೆಗಳು ಜಿಲ್ಲೆಯಲ್ಲಿ ಕೋಮು ಸಾಮರಸ್ಯವನ್ನು ಹಾಳುಮಾಡುತ್ತಿದೆ. ಧರ್ಮವನ್ನು ಎತ್ತಿ ಕಟ್ಟಿ ರಾಜಕೀಯ ಲಾಭ ಗಳಿಸುವ ಹುನ್ನಾರ ನಮಗಿಲ್ಲ. ಚುನಾವಣೆ ಸಂದರ್ಭದಲ್ಲಿ ಮತ ವಿಭಜನೆ ಮಾಡುವ ದೃಷ್ಟಿಯಿಂದ ಜಿಲ್ಲೆಯಲ್ಲಿ ಗಲಭೆಯನ್ನು ಎಬ್ಬಿಸುತ್ತಿದ್ದಾರೆ ಎಂದು ಮಹಾನಗರ ಪಾಲಿಕೆ ಕಾರ್ಪೋರೇಟರ್ ಶಶಿಧರ್ ಹೆಗ್ಡೆ ಹೇಳಿದರು.

ಮಂಗಳೂರು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಲ್ಲಡ್ಕದಲ್ಲಿ ನಡೆದ ಅಹಿತಕರ ಘಟನೆಯ ಕುರಿತು ರಮಾನಾಥ ರೈಗೆ ಅಸಮಾಧಾನವಿದೆ. ಬಿಜೆಪಿ ಕ್ಷುಲ್ಲಕ ಕಾರಣಕ್ಕಾಗಿ ಗಲಭೆ ಎಬ್ಬಿಸುತ್ತಿದ್ದ ಕಾರಣಕ್ಕಾಗಿ ಸಚಿವರು ಎಸ್ಪಿಗೆ ಪ್ರಕರಣದ ಕುರಿತು ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ ಹೊರತು ಬಿಜೆಪಿಯ ವಿರುದ್ಧ ಧರ್ಮ ಎತ್ತಿ ಕಟ್ಟುವ ಉದ್ದೇಶ ಕಾಂಗ್ರೆಸ್ ಗಿಲ್ಲ ಎಂದು ವಿಶ್ಲೇಷಿಸಿದರು.

ಕೆಲವು ಯುವಕರನ್ನು ಜತೆಗೂಡಿಸಿಕೊಂಡು ಇಂತಹ ಅಹಿತಕರ ಘಟನೆಯನ್ನು ಪ್ರಭಾಕರ ಭಟ್ ಮಾಡುತ್ತಿದ್ದಾರೆ. ಇದರಿಂದಾಗಿ ಯುವಕರ ಕುಟುಂಬ ಇಂದು ಸಂಕಷ್ಟದಲ್ಲಿದೆ. ಬಿಜೆಪಿಯ ಉದ್ರೇಕದ ಸ್ವಭಾವದಿಂದ ಜಿಲ್ಲೆಯಲ್ಲಿ ಇಂದು ಹಿಂದುಳಿದ ವಾತಾವರಣವಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಮಾಧ್ಯಮದವರ ಪ್ರಶ್ನೆಗೆ ಉತ್ತರ ನೀಡಿದ ಅವರು, ಕಾಂಗ್ರೆಸ್ಸಿನ ಅಭಿವೃದ್ದಿ ಕಾರ್ಯಗಳ ಬಗ್ಗೆ ಬಿಜೆಪಿ ಭ್ರಮನಿರಸನಗೊಂಡಿದೆ ಎಂದರು.

ಮಂಗಳವಾರ ನಡೆದ ಮಹಿಳಾ ಕಾಂಗ್ರೆಸ್ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಶ್ಯಾಲಿಟ್ ಪಿಂಟೋ ಅವರ ಬಗ್ಗೆ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ವಕ್ತಾರ ನವೀನ್ ಡಿಸೋಜಾ, ಡಿ.ಕೆ ಅಶೋಕ್  ಕುಮಾರ್, ಕೆ. ಭಾಸ್ಕರ್, ಮಹಾನಗರ ಪಾಲಿಕೆ ಸದಸ್ಯ ನವೀನ್, ರಾಧಾಕೃಷ್ಣ, ನಾಗೇಶ್, ಮತ್ತಿತರರು ಉಪಸ್ಥಿತರಿದ್ದರು.

See also  ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಸಾಧನೆಯ ಪ್ರತಿಬಿಂಬ: ಗಮನ ಸೆಳೆದ ಭಾರತ ಭಾಗ್ಯವಿಧಾತ ಧ್ವನಿ-ಬೆಳಕು ಕಾರ್ಯಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು