ಮಂಗಳೂರು: ಉಳ್ಳಾಲ ಸಮೀಪದ ನಾಟೇಕಲ್ನಲ್ಲಿ ಇಂದು ನಸುಕಿನ ವೇಳೆ ದುಷ್ಕರ್ಮಿಗಳು ಮಸೀದಿಯೊಂದಕ್ಕೆ ಕಲ್ಲು ತೂರಿದ ಘಟನೆ ನಡೆದಿದೆ.
ಈ ಘಟನೆಯಿಂದ ಮಸೀದಿಯ ಕಿಟಕಿ ಗಾಜುಗಳು ಒಡೆದು ಹೋಗಿವೆ. ಸಮೀಪದ ಅಂಗಡಿಯೊಂದರ ಸಿಸಿಟಿವಿ ಕ್ಯಾಮೆರಾಗಳನ್ನೂ ಕದ್ದೊಯ್ದಿದ್ದಾರೆ. ಇದೀಗ ಆರೋಪಿಗಳಿಗೆ ಸಂಬಂಧಿಸಿದ ಒಂದು ಬೈಕ್ ಅನ್ನು ಪೊಲೀಸರು ವಶಕ್ಕೆ ಪಡೆದು ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.