News Kannada
Tuesday, March 28 2023

ಕರಾವಳಿ

ಸುಬ್ರಹ್ಮಣ್ಯದಲ್ಲಿ ಗಲಾಟೆ ಪ್ರಕರಣ: ಗುರುಪ್ರಸಾದ್ ಪಂಜ ಬಂಧನ

Photo Credit :

ಸುಬ್ರಹ್ಮಣ್ಯದಲ್ಲಿ ಗಲಾಟೆ ಪ್ರಕರಣ: ಗುರುಪ್ರಸಾದ್ ಪಂಜ ಬಂಧನ

ಸುಳ್ಯ: ಸುಬ್ರಹ್ಮಣ್ಯದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮಧ್ಯೆ ಉಂಟಾದ ಘರ್ಷಣೆಗೆ ಸಂಬಂಧಿಸಿ ಬಂಧಿತನಾದ ಸುಳ್ಯ ತಾಲೂಕು ಹಿಂದೂ ಜಾಗರಣ ವೇದಿಕೆಯ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಪಂಜನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಘರ್ಷಣೆಯಲ್ಲಿ ಗಾಯಗೊಂಡು ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುರುಪ್ರಸಾದ್‍ನನ್ನು ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಪೊಲೀಸರು ಬಂಧಿಸಿ ಬುಧವಾರ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ.13ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಚೈತ್ರಾ ಕುಂದಾಪುರ ನೀಡಿದ ದೂರಿನ ಹಿನ್ನಲೆಯಲ್ಲಿ ಗುರುಪ್ರಾದ್ ಪಂಜ ಮತ್ತು ಇತರರ ಮೇಲೆ ಕೇಸು ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಪಟ್ಟು ಘಟನೆ ನಡೆದ ಮರುದಿನ ಬಂಧಿತರಾದ ಚೈತ್ರಾ ಕುಂದಾಪುರ ಮತ್ತು ಇತರ ಆರು ಮಂದಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಚೈತ್ರಾ ಕುಂದಾಪುರ ತಂಡ ಮತ್ತು ಗುರುಪ್ರಸಾದ್ ತಂಡಗಳ ಮಧ್ಯೆ ಅ.24 ರಂದು ಸಂಜೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಘರ್ಷಣೆ ನಡೆದಿತ್ತು. ಘಟನೆಗೆ ಸಂಬಂಧಪಟ್ಟು ಇತ್ತಂಡಗಳ ಕಾರ್ಯಕರ್ತರ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಿಸಲಾಗಿದೆ.

See also  ನಾಲ್ಕು ಮನೆಗಳ ಚಿನ್ನಾಭರಣ, ನಗದು ಕಳವು: ಆರೋಪಿಯ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

180

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು