News Kannada
Saturday, March 25 2023

ಕರಾವಳಿ

ಗೋ ಕಳ್ಳತನ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಹರೀಶ್ ಪೂಂಜಾ ಮನವಿ

Photo Credit :

ಗೋ ಕಳ್ಳತನ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಹರೀಶ್ ಪೂಂಜಾ ಮನವಿ

ಬೆಳ್ತಂಗಡಿ: ಗೋಕಳ್ಳತನ, ಅಕ್ರಮ ಗೋಸಾಗಾಟದ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಹರೀಶ ಪೂಂಜಾ ಅವರು ರಾಜ್ಯ ಪೋಲಿಸ್ ಮಹಾನಿರ್ದೇಶಕರಿಗೆ ಮನವಿ ಮಾಡಿದ್ದಾರೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅವ್ಯಾವಹತವಾಗಿ ಗೋಕಳ್ಳತನ, ಅಕ್ರಮ ಗೋಸಾಗಾಟ ಹೆಚ್ಚುತ್ತಿದೆ. ಮೇಯಲು ಬಿಟ್ಟ ಗೋವುಗಳನ್ನು ಕಳ್ಳತನ ಮಾಡುತ್ತಿದ್ದ ಗೋಕಳ್ಳರು ಈಗ ಬಡರೈತರ ಕೊಟ್ಟಿಗೆಗೆ ನುಗ್ಗಿ, ತಲವಾರು ಬೀಸಿ ಗೋವುಗಳನ್ನು ಅಪಹರಿಸುತ್ತಿದ್ದಾರೆ. ಇದನ್ನು ತಡೆಯಲು ಜಿಲ್ಲಾಡಳಿತ ವಿಫಲವಾಗುತ್ತಿದೆ. ಚಾರ್ಮಾಡಿಯಲ್ಲಿ ಅಪಘಾತಕ್ಕೀಡಾದ ವಾಹನವೊಂದರಲ್ಲಿ ಕರುಣಾಜನಕ ಸ್ಥಿತಿಯಲ್ಲಿ ಪತ್ತೆಯಾದ ಗೋವುಗಳ ಪ್ರಸ್ತುತ ಪರಿಸ್ಥಿತಿಗೆ ಕೈಗನ್ನಡಿಯಾಗಿದೆ. ಸಾರ್ವಜನಿಕರು ಗೋಕಳ್ಳತನ ತಡೆಯುವ ಪ್ರಯತ್ನ ಮಾಡಿದಾಗ ಅವರ ಮೇಲೆ ಕೇಸ್ ದಾಖಲಾಗಿದೆಯೇ ಹೊರತಾಗಿ ಅಕ್ರಮ ಗೋಸಾಗಾಟ ನಿಲ್ಲಿಸುವ ಯಾವ ಪ್ರಯತ್ನವೂ ನಡೆದಿಲ್ಲ. ನಾಲ್ಕು ದಿನದ ಹಿಂದೆ ಗೋಕಳ್ಳರನ್ನು ಹಿಡಿದ ಪೊಲೀಸರ ಮುಂದೆ ಪಟಾಕಿ ಸಿಡಿಸಿ ಗೋವುಗಳನ್ನು ಸಾಗಿಸಿ ಪೊಲೀಸರಿಗೆ ಸವಾಲೆಸೆದ ಘಟನೆಯು ನಡೆದಿದೆ.

ಇದೇ ರೀತಿ ನಡೆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕದಡುವ ಸಾಧ್ಯತೆ ಇದೆ. ಈ ಕುರಿತಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್ ರಾಜು ಅವರನ್ನು ಭೇಟಿಯಾಗಿ ಗೋಕಳ್ಳತನ, ಅಕ್ರಮ ಗೋಸಾಗಾಟದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಹರೀಶ್ ಪೂಂಜಾ ಆಗ್ರಹಿಸಿದರು.

See also  ಧರ್ಮಸ್ಥಳ ಮಹಾಮಸ್ತಕಾಭಿಷೇಕದಲ್ಲಿ ಪೆಂಡಾಲ್ ಕುಸಿದು ಹಲವರಿಗೆ ಗಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು