News Kannada
Thursday, March 30 2023

ಕರಾವಳಿ

ಅಂತರರಾಜ್ಯ ಗಾಂಜಾ ಜಾಲ ಭೇದಿಸಿದ ಮಂಗಳೂರು ಪೊಲೀಸರು

Photo Credit :

ಅಂತರರಾಜ್ಯ ಗಾಂಜಾ ಜಾಲ ಭೇದಿಸಿದ ಮಂಗಳೂರು ಪೊಲೀಸರು

ಮಂಗಳೂರು: ನಗರ ಪೊಲೀಸರು ಅಂತರ್ ರಾಜ್ಯ ಮಟ್ಟದ ಮಾದಕವಸ್ತು ಪೂರೈಕೆ ಜಾಲವೊಂದನ್ನು ಭೇದಿಸಿ, ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ಸುಮಾರು ಹತ್ತು ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ಧರ್ಮನಗರ ನಿವಾಸಿ ಅಬೂಬಕ್ಕರ್ ಸಮದ್ ಅಲಿಯಾಸ್ ಸಮದ್(24), ವರ್ಕಾಡಿ ನಿವಾಸಿ ಮಹಮ್ಮದ್ ಅಸ್ತಫ್ ಅಲಿಯಾಸ್ ಅಶ್ರಫ್(30), ಕಡಂಬಾರು ದುರ್ಗಿಪಳ್ಯ ನಿವಾಸಿ ಮಹಮ್ಮದ್ ಅಫ್ರಿದ್(22) ಮತ್ತು ಮುಕ್ತಾಣ ನಿವಾಸಿ ಮಹಮದ್ ಅರ್ಷದ್(18) ಎಂಬವರನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಆರೋಪಿಗಳಿಂದ ಒಂದು ಕಾರು, ಹತ್ತು ಕೆಜಿ ಗಾಂಜಾ ಮತ್ತು ಮೂರು ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವರು ಅಂತರ್ ರಾಜ್ಯ ಮಟ್ಟದಲ್ಲಿ ಗಾಂಜಾ ಪೂರೈಕೆ ಜಾಲ ಹೊಂದಿದ್ದರು ಎಂದು ಅವರು ತಿಳಿಸಿದರು.

See also  ಕ್ಷೇತ್ರದ ಜನರು ಮತ್ತೊಮ್ಮೆ ಆಶೀರ್ವಾದ ಮಾಡಿದರೆ ದುಪ್ಪಟ್ಟು ಅಭಿವೃದ್ಧಿ: ರೈ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

187

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು