News Kannada
Monday, March 20 2023

ಕರಾವಳಿ

ಡಾ.ಪ್ರಭಾಕರ ಶಿಶಿಲರ ಆತ್ಮಕಥನ `ಬೊಗಸೆ ತುಂಬಾ ಕನಸು’ ಬಿಡುಗಡೆ

Photo Credit :

ಡಾ.ಪ್ರಭಾಕರ ಶಿಶಿಲರ ಆತ್ಮಕಥನ `ಬೊಗಸೆ ತುಂಬಾ ಕನಸು' ಬಿಡುಗಡೆ

ಸುಳ್ಯ: ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ಕನಸು ಕಾಣಬೇಕು ಮತ್ತು ಅದರ ಸಾಕಾರಕ್ಕೆ ಸೃಜನಶೀಲವಾಗಿ ಪ್ರಯತ್ನ ನಡೆಸಬೇಕು. ಧನಾತ್ಮಕ ಚಿಂತನೆಯ ಸೃಜನಶೀಲತೆಯಿಂದ ಅದ್ಭುತ ಸಾಧನೆಯನ್ನು ಮಾಡಬಹುದು ಎಂದು ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದ್ದಾರೆ.

ಸುಳ್ಯ ನೆಹರೂ ಸ್ಮಾರಕ ಮಹಾ ವಿದ್ಯಾಲಯ ಮತ್ತು ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ನೆಹರೂ ಸ್ಮಾರಕ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ, ವಿದ್ವಾಂಸ, ನಿವೃತ್ತ ಪ್ರಾಂಶುಪಾಲ ಡಾ.ಬಿ.ಪ್ರಭಾಕರ ಶಿಶಿಲರ ಆತ್ಮಕಥನ `ಬೊಗಸೆ ತುಂಬಾ ಕನಸು’ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು. ಸಾಮಾನ್ಯ ವ್ಯಕ್ತಿಯೊಬ್ಬ ಅಸಾಮಾನ್ಯತೆಯ ಕಡೆಗೆ ನಡೆದ ಅದ್ಭುತ ಕಥೆ ಡಾ.ಪ್ರಭಾಕರ ಶಿಶಿಲ ಅವರದ್ದು. ಅವರ ಈ ಸಾಧನೆ ಬೊಗಸೆ ತುಂಬಾ ಕನಸು ರೂಪದಲ್ಲಿ ಹೊರ ಬಂದಿದೆ ಎಂದು ಅವರು ಹೇಳಿದರು.

ಮಾತನಾಡದ ಭಾಷೆಯೊಳಗೆ ದೇಶದ ಆತ್ಮ ಅಡಗಿದೆ-ಡಾ.ಬಿಳಿಮಲೆ
ಇದುವರೆಗೆ ಮಾತನಾಡದ ಸಣ್ಣ ಭಾಷೆಯೊಳಗೆ ಭಾರತದ ನಿಜವಾದ ಆತ್ಮ ಅಡಗಿದೆ ಎಂದು ಕೃತಿಯ ಬಗ್ಗೆ ಮಾತನಾಡಿದ ನೆಹರೂ ವಿಶ್ವ ವಿದ್ಯಾನಿಲಯದ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ ಡಾ.ಬಿ.ಪುರುಷೋತ್ತಮ ಬಿಳಿಮಲೆ ಹೇಳಿದರು. ಸಣ್ಣ ಭಾಷೆಯ ಮತ್ತು ಆ ಭಾಷೆಗಳನ್ನು ಮಾತನಾಡುವ ಸಮುದಾಯದ ಅನುಭವಗಳು ದೇಶದ ಸಂಸ್ಕೃತಿಯ ಭಾಗವಾಗಿ ಬರುತ್ತಿಲ್ಲ.ಸಣ್ಣ ಭಾಷೆಗಳ ಮತ್ತು ಸಣ್ಣ ಮನುಷ್ಯರ ಬದುಕು ಹಾಗು ಸಾಧನೆಗಳು ಒಂದೊಂದು ಹೆಜ್ಜೆ ಗುರುತಾಗಿ ದೇಶ ಕಟ್ಟಲು ಮೆಟ್ಟಿಲಾಗಬೇಕು. ನಮ್ಮ ಯೋಚನೆಗಳನ್ನು ಸ್ವಲ್ಪ ಬದಲಾಯಿಸಿದರೆ ಸಣ್ಣ ಜನರ ಆತ್ಮ ಚರಿತ್ರೆಗಳು,ಸಣ್ಣ ಭಾಷೆಗಳಲ್ಲಿ ಅಡಗಿರುವ ಮೌಲ್ಯಗಳು ಮಹತ್ವ ಪಡೆದುಕೊಳ್ಳುತ್ತವೆ ಎಂದು ಅಭಿಪ್ರಾಯಪಟ್ಟರು. ನಮ್ಮ ದೇಶ ಒಂದು ರಂಗೋಲಿಯಂತೆ ಅದು ನೂರಾರು ಬಣ್ಣಗಳನ್ನು ಒಳಗೊಂಡಿದೆ. ಅಂತಹಾ ರಂಗೋಲಿಗೆ ಶಿಶಿಲರು ಒಂದು ಬಣ್ಣ ಸೇರಿಸಿದ್ದಾರೆ ಎಂದರು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‍ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‍ನ ನಿರ್ದೇಶಕರಾದ ಶೋಭಾ ಚಿದಾನಂದ, ಅಕ್ಷಯ್ ಕೆ.ಸಿ. ಅತಿಥಿಗಳಾಗಿದ್ದರು. ನೆಹರೂ ಸ್ಮಾರಕ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ ಸಂಘದ ಮಾರ್ಗದರ್ಶಕಿ ಪ್ರೊ.ರತ್ನಾವತಿ ಕೇರ್ಪಳ, ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ.ಪೂವಪ್ಪ ಕಣಿಯೂರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಕಾಲೇಜಿನ ವಿದ್ಯಾರ್ಥಿ ನಾಯಕ ಕೃಷ್ಣಪ್ರಸಾದ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಗಿರಿಧರ ಗೌಡ ಸ್ವಾಗತಿಸಿದರು. ಡಾ.ಪ್ರಭಾಕರ ಶಿಶಿಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ವಿದ್ಯಾರ್ಥಿ ಸಂಘದ ದಿನೇಶ್ ಮಡಪ್ಪಾಡಿ ವಂದಿಸಿದರು. ಅಚ್ಚುತ ಅಟ್ಲೂರು, ಡಾ.ಅನುರಾಧಾ ಕುರುಂಜಿ ಕಾರ್ಯಕ್ರಮ ನಿರೂಪಿಸಿದರು. ಡಾ.ಪ್ರಭಾಕರ ಶಿಶಿಲ ದಂಪತಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.

See also  ವನಭೋಜನ: ತೋಡಿನಲ್ಲಿ ಹರಿಯಬೇಕಾದ ಮಳೆ ನೀರು ರೋಡಿನಲ್ಲಿ..!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು