News Kannada
Thursday, March 23 2023

ಕರಾವಳಿ

ಸುಳ್ಯ ಶಾಸಕ ಎಸ್.ಅಂಗಾರರಿಂದ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಗೆ ಮನವಿ

Photo Credit :

ಸುಳ್ಯ ಶಾಸಕ ಎಸ್.ಅಂಗಾರರಿಂದ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಗೆ ಮನವಿ

ಸುಳ್ಯ: ಪ್ರತಿ ಗ್ರಾಮಮಟ್ಟದಲ್ಲೂ ಕರ್ನಾಟಕ ಪಬ್ಲಿಕ್ ಸ್ಕೂಲ್‍ಗಳನ್ನು ತೆರೆಯಲು ಕ್ರಮ ವಹಿಸಬೇಕೆಂದು ಸುಳ್ಯ ಶಾಸಕ ಎಸ್.ಅಂಗಾರ ಶಿಕ್ಷಣ ಸಚಿವರಲ್ಲಿ ಮನವಿ ಮಾಡಿದ್ದಾರೆ. ಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ ಚರ್ಚಿಸಿ, ಮನವಿ ಮಾಡಿದರು.

ಇಂಗ್ಲಿಷ್ ಶಿಕ್ಷಣದ ವ್ಯಾಮೋಹದಿಂದ ಶ್ರೀಮಂತರ ಮಕ್ಕಳು ಖಾಸಿಗೀ ಸಂಸ್ಥೆಗಳ ಮೂಲಕ ಶಿಕ್ಷಣ ಪಡೆಯುತ್ತಾರೆ. ಆದರೆ ಬಡವರ ಮಕ್ಕಳು ಮಾತ್ರ ಸರಕಾರಿ ಕನ್ನಡ ಶಾಲೆಗಳಲ್ಲಿ ಕಲಿಯುತ್ತಿದ್ದಾರೆ. ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಕೊರತೆ ಇದ್ದು, ಕರ್ನಾಟಕ ಪಬ್ಲಿಕ್ ಸ್ಕೂಲ್‍ಗಳನ್ನು ಗ್ರಾಮ ಮಟ್ಟದಲ್ಲಿ ತೆರೆದಾಗ, ಬಡಮಕ್ಕಳಿಗೂ ಇಂಗ್ಲಿಷ್ ಶಿಕ್ಷಣ ಕೈಗೆಟಕುವಂತಾಗುತ್ತದೆ ಎಂದು ಅವರು ಮನವಿ ಮಾಡಿದರು.

ಸಚಿವರು ಮನವಿಗೆ ಸ್ಪಂದಿಸಿ, ಈ ಬಗ್ಗೆ ರೂಪುರೇಷೆಗಳನ್ನು ಸಿದ್ಧಪಡಿಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇದೇ ವೇಳೆ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಮತ್ತು ಬೋದಕೇತರ ಹುದ್ದೆಗಳನ್ನು ತುಂಬಲು ಕ್ರಮವಹಿಸಬೇಕೆಂದು ಸಚಿವರಲ್ಲಿ ವಿನಂತಿಸಿದರು.

ಸುಳ್ಯ ತಾಲೂಕು ಪಂಚಾಯಿತಿ ಸದಸ್ಯ ರಾಧಾಕೃಷ್ಣ ಬೊಳ್ಳೂರು, ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ವೆಂಕಟ್ ವಳಲಂಬೆ ಇದ್ದರು.

See also  ಬೇಲಿಯಲ್ಲಿ ಸಿಲುಕಿದ್ದ ಕಾಳಿಂಗ ಸರ್ಪದ ರಕ್ಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

180

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು