News Kannada
Tuesday, March 28 2023

ಕರಾವಳಿ

ಬಂಟ್ವಾಳ: ನಾರಾಯಣಗುರುಗಳಿಗೆ ಗೌರವ ನೀಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದ ನಳಿನ್ ಕುಮಾರ್

Nalin Kumar said that the government is doing the work of honouring Brahmasree Narayana Guru.
Photo Credit : By Author

ಬಂಟ್ವಾಳ: ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳನ್ನು ಪಾಲಿಸುವ ಮೂಲಕ, ಚಿಂತನೆಗಳನ್ನು ಕಾರ್ಯರೂಪಕ್ಕೆ ತರಲಾಗುತ್ತಿದ್ದು, ಅವರಿಗೆ ಗೌರವ ನೀಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ) ವತಿಯಿಂದ  ಭಾನುವಾರ ಬಿ.ಸಿ.ರೋಡಿನ ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ನಡೆದ  ಬ್ರಹ್ಮಶ್ರೀ ನಾರಾಯಣ ಗುರುವರ್ಯರ ೧೬೮ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿ ವಿವಿಧ ಸಾಧಕರನ್ನು ಸನ್ಮಾನಿಸಿ ಮಾತನಾಡಿದರು.

ನಾರಾಯಣಗುರುಗಳು ಜಗತ್ತಿನ ಗುರುಗಳು. ಅವರ ಚಿಂತನೆಗಳು ಚರ್ಚೆಗಷ್ಟೇ ಸೀಮಿತವಾಗದೆ ನಿರಂತರವಾಗಿ ಹೃದಯದಲ್ಲಿರಬೇಕು ಎಂದು ನಳಿನ್ ಹೇಳಿದರು.

ಕನ್ಯಾಡಿ ಧರ್ಮಸ್ಥಳದ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿ, ಸನಾತನ ಧರ್ಮ ಎಂಬುದು ಬದುಕಿನ ಸಂವಿಧಾನ. ಸತ್ಯದ ಮೌಲ್ಯ ನೀಡಿದವರು ಬ್ರಹ್ಮಶ್ರೀ ನಾರಾಯಣಗುರುಗಳು, ಅವರ ವಿಚಾರದಲ್ಲಿ ಪಕ್ಷ ರಾಜಕೀಯ ದೂರವಿಡಬೇಕು ಎಂದ ಅವರು ಎಲ್ಲರೂ ರಾಷ್ಟ್ರೀಯತೆಗೆ ಅದ್ಯತೆ ನೀಡಿ ಮುನ್ನಡೆಯುವಂತೆ ಕರೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪೂರ್ವಾಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್‌, ರಾಜ್ಯ ಸರಕಾರ ನಾರಾಯಣಗುರು ಜಯಂತಿ ಆಚರಣೆ ನಡೆಸಲು ತಾನು ಪ್ರಸ್ತಾವಿಸಿದ್ದೆ ಎಂದು ಸ್ಮರಿಸಿದರು. ನಾರಾಯಣಗುರುಗಳು ಒಂದು ಜಾತಿಗೆ ಸೀಮಿತವಾದವರಲ್ಲ ಎಂದ ಅವರು, ರಾಜ್ಯಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆಗೆ ಜನಸ್ತೋಮವೇ ಸೇರಿದ್ದು ಇದಕ್ಕೆ ಸಾಕ್ಷಿ ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿ ಮುಖ್ಯ ಅತಿಥಿಗಳಾಗಿದ್ದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್‌ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಎನ್.ಮಹಾಬಲ ಬಂಗೇರ, ಪ್ರಧಾನ ಕಾರ್ಯದರ್ಶಿ ರಮೇಶ್ ಎಂ. ತುಂಬೆ, ಜತೆ ಕಾರ್ಯದರ್ಶಿ ಆನಂದ ಸಾಲಿಯಾನ್ ಶಂಭೂರು, ಕೋಶಾಧಿಕಾರಿ ಉಮೇಶ್ ಸುವರ್ಣ, ಲೆಕ್ಕಪರಿಶೋಧಕ, ನ್ಯಾಯವಾದಿ ಸತೀಶ್ ಬಿ, ಮಹಿಳಾ ಸಮಿತಿ ಅಧ್ಯಕ್ಷೆ ರೇವತಿ ಬಡಗಬೆಳ್ಳೂರು ಉಪಸ್ಥಿತರಿದ್ದರು.

ಈ ಸಂದರ್ಭ ಜಿಪಂ ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತ ಶೈಲಜಾ ರಾಜೇಶ್, ಬಿ.ಸಿ.ರೋಡ್            ಶ್ರೀ ರಣೇಶ್ವರಿ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಬಿ.ವಿಶ್ವನಾಥ ಅವರನ್ನು ಸನ್ಮಾನಿಸಲಾಯಿತು. ವಿದುಷಿ ಡಾ.ದಾಕ್ಷಾಯಿಣಿ ಕಂದೂರು, ಸ್ವಾತಿ ಕುದ್ರೋಳಿ ಅವರನ್ನು ಅಭಿನಂದಿಸಲಾಯಿತು. ದಿನೇಶ ಸುವರ್ಣ ರಾಯಿ ಕಾರ್ಯಕ್ರಮ ನಿರ್ವಹಿಸಿದರು.

ಮಧ್ಯಾಹ್ನ ಬಿಲ್ಲವ ಮಹಿಳಾ ಸಮಿತಿ ಮತ್ತು ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಸಹಯೋಗದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮ, ಬೆಳಗ್ಗೆ ಭಜನೆ, ಗುರುಪೂಜೆ, ಮಹಾಪೂಜೆ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. 25 ವರ್ಷಗಳಿಂದ ಯಶಸ್ವಿಯಾಗಿ ಅಧ್ಯಕ್ಷರಾಗಿರುವ ಸೇಸಪ್ಪ ಕೋಟ್ಯಾನ್‌ ಅವರನ್ನು ಅಭಿನಂದಿಸಲಾಯಿತು.

See also  ಆಳ್ವಾಸ್ ವಿರಾಸತ್‍ಗೆ ರಜತ ಸಂಭ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು