News Kannada
Friday, March 31 2023

ಕರಾವಳಿ

ರಾಜ್ಯದ ಕರಾವಳಿ ತೀರ ಸುರಕ್ಷಿತ: ಕೋಸ್ಟ್ ಗಾರ್ಡ್ ಕಮಾಂಡರ್ ಪಿ.ಕೆ.ಮಿಶ್ರಾ ಅಭಿಮತ

State's coastline is safe: Coast Guard Commander P.K.Mishra Abhima
Photo Credit : News Kannada

ಉಡುಪಿ: ರಾಜ್ಯದ ಕರಾವಳಿ ಕಾವಲು ಪಡೆಗೆ, ಮಲ್ಪೆಯ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯಲ್ಲಿ ನೀಡಿರುವ ತರಬೇತಿಯ ಕಾರ್ಯ ವಿಧಾನಗಳನ್ನು , ದೈನಂದಿನ ಕರ್ತವ್ಯದಲ್ಲಿ ಸಮರ್ಪಕವಾಗಿ ಅಳವಡಿಸಿಕೊಳ್ಳುವ ಮಾಡುವ ಕರಾವಳಿ ತೀರವನ್ನು ಸುರಕ್ಷಿತವಾಗಿಡಲು ಸಾಧ್ಯ ಎಂದು ಮಂಗಳೂರು ವಿಭಾಗದ ಕೋಸ್ಟ್ ಗಾರ್ಡ್‌ ಡಿಐಜಿ ಕಮಾಂಡರ್ ಪಿ.ಕೆ.ಮಿಶ್ರಾ ಹೇಳಿದರು.

ಶನಿವಾರ ಮಲ್ಪೆಯ ಕರಾವಳಿ ಕಾವಲು ಪೊಲೀಸ್ ಕಚೇರಿಯಲ್ಲಿ ನಡೆದ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ, ಮೊದಲ ತಂಡದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಸಮುದ್ರದಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಸೂಕ್ತ ರೀತಿಯ ಸಂವಹನ ಹಾಗೂ ಕಾರ್ಯಚರಣೆ ಕುರಿತ ಸ್ಪಷ್ಟ ಮಾಹಿತಿಗಳು ಎಲ್ಲಾ ಸಿಬ್ಬಂದಿಗಳಿಗೂ ಇರಬೇಕು. ಕೌಶಲ್ಯದಿಂದ ಕೂಡಿದ ಕಾರ್ಯವಿಧಾನವನ್ನು ಅಳವಡಿಸಿಕೊಂಡು , ಕರ್ತವ್ಯ ಸಂದರ್ಭದಲ್ಲಿ ಎದುರಾಗುವ ಎಲ್ಲಾ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಬೇಕು. ಸಿಬ್ಬಂದಿಗಳಿಗೆ ಇನ್ನೂ ಹೆಚ್ಚಿನ ತರಬೇತಿಯ ಅಗತ್ಯವಿದಲ್ಲಿ ಕೋಸ್ಟ್ ಗಾರ್ಡ್ ವತಿಯಿಂದ ಸಹಕಾರ ನೀಡಲಾಗುವುದು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಮಾತನಾಡಿ, ಕರಾವಳಿ ಭದ್ರತಾ ತರಬೇತಿ ಸಂಸ್ಥೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಮಾತ್ರವಲ್ಲದೇ ಜಿಲ್ಲೆ ಹಾಗೂ ರಾಜ್ಯದ ಕಂದಾಯ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆಯ ಸಿಬ್ಬಂದಿಗಳಿಗೂ ಅಗತ್ಯವಿರುವ ಅಗತ್ಯ ತರಬೇತಿ ನೀಡುವುದರಿಂದ ರಾಜ್ಯದಲ್ಲಿ ಪ್ರಾಕೃತಿಕ ವಿಕೋಪ ಸಂದರ್ಭಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗಲಿದೆ. ಸಾರ್ವಜನಿಕರಿಗೂ ಸಹ ಸರ್ಟಿಫಿಕೇಟ್ ಕೋರ್ಸ್‌ ತರಬೇತಿ ನೀಡುವ ಮೂಲಕ , ಈ ತರಬೇತಿ ಸಂಸ್ಥೆಯಲ್ಲಿ ನಿರಂತರವಾಗಿ ಕಾರ್ಯಕ್ರಮಗಳನ್ನು ಆಯೋಜಿಸಬಹುದಾಗಿದೆ ಎಂದರು. ನಕ್ಸಲ್ ನಿಗ್ರಹ ಪಡೆಯ ಎಸ್ಪಿ ನಿಕ್ಕಂ ಪ್ರಕಾಶ್ ಅಮೃತ್ ಉಪಸ್ಥಿತರಿದ್ದರು.

ತರಬೇತಿ : ಮಲ್ಪೆಯ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯಲ್ಲಿ ಫೆಬ್ರವರಿ 13 ರಿಂದ 25 ರ ವರೆಗೆ ನಡೆದ ಪ್ರಥಮ ತಂಡದ ಈ ತರಬೇತಿ ಕಾರ್ಯಕ್ರಮದಲ್ಲಿ ರಾಜ್ಯದ ಕರಾವಳಿ ಕಾವಲು ಪೊಲೀಸ್‌ನ 25 ಸಿಬ್ಬಂದಿ ಭಾಗವಹಿಸಿದ್ದು, ಅವರಿಗೆ ಸಮುದ್ರದಲ್ಲಿ ಈಜು ತರಬೇತಿ, ಅಪಾಯಕ್ಕೆ ಸಿಲುಕಿದವರ ರಕ್ಷಣೆ, ಅಗ್ನಿ ಅವಘಡಗಳಿಂದ ರಕ್ಷಣೆ, ಸಮುದ್ರದಲ್ಲಿ ಸಂಪರ್ಕ ವ್ಯವಸ್ಥೆಗಳ ಬಳಕೆ, ಬೋಟ್ ಗಳ ಕಾರ್ಯವಿಧಾನ, ಡ್ರೋಣ್ ಬಳಕೆ, ಅಗತ್ಯ ಕಾಯಿದೆಗಳು ಸೇರಿದಂತೆ ರಕ್ಷಣಾ ಕಾರ್ಯಚರಣೆಗೆ ಅಗತ್ಯವಿರುವ ಅತ್ಯಗತ್ಯ ತರಬೇತಿಯನ್ನು ನೀಡಲಾಗಿದೆ. ತರಬೇತಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಸಿಬ್ಬಂದಿಗಳಿಗೆ ಬಹುಮಾನ ವಿತರಿಸಲಾಯಿತು.
ಕರಾವಳಿ ಕಾವಲು ಪೊಲೀಸ್‌ ಎಸ್ಪಿ ಹಾಗೂ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಅಬ್ದುಲ್ ಅಹದ್ ಸ್ವಾಗತಿಸಿದರು. ಕರಾವಳಿ ಕಾವಲು ಪೊಲೀಸ್ ಇನ್‌ಸ್ಪೆಕ್ಟರ್‌ ಶಂಕರ್ ನಿರೂಪಿಸಿದರು. ಇನ್‌ಸ್ಪೆಕ್ಟರ್‌ ಪ್ರಮೋದ್ ವಂದಿಸಿದರು.

See also  ಹಿಂದೂ ಜಾಗರಣಾ ವೇದಿಕೆಯ ಮುಖಂಡ ಪೊಲೀಸ್ ವಶಕ್ಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು