News Kannada
Wednesday, May 31 2023
ಕರಾವಳಿ

ಎಮ್.ಸಿ.ಸಿ. ಬ್ಯಾಂಕ್ 2022–23 ರ ಸಾಧನೆ: ಪಂಚ ಜಿಲ್ಲೆಗಳಿಗೆ ಕಾರ್ಯ ಕ್ಷೇತ್ರ ವಿಸ್ತರಣೆ

MCC Bank 2022-23 Performance: Extension of work area to five districts
Photo Credit : News Kannada

ಮಂಗಳೂರು: ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 111 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಂ.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2023 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ 12.20 ಕೋಟಿ ರೂಪಾಯಿ ಲಾಭಗಳಿಕೆ ದಾಖಲಿಸಿದೆ ಎಂದು ಬ್ಯಾಂಕ್‌ ಅಧ್ಯಕ್ಷ ಅನಿಲ್ ಲೋಬೊ ಸುದ್ದಿಗೋಷ್ಠಿಯಲ್ಲಿ  ತಿಳಿಸಿದರು.

ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆ ಮಾಡಲು ಬ್ಯಾಂಕ್ ಶ್ರಮಿಸುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಪ್ರಪ್ರಥಮ ಬಾರಿಗೆ 1.37 ಶೇ. ಎನ್.ಪಿ.ಎ. ದಾಖಲಿಸಿದೆ.

ದಾಖಲೆಯ ಲಾಭ ಮತ್ತು ಕನಿಷ್ಠ ಎನ್.ಪಿ.ಎ. ಜೊತೆಗೆ, 2022–2023ನೇ ವಿತ್ತೀಯ ವರ್ಷದಲ್ಲಿ, ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ನೇತೃತ್ವದ ಆಡಳಿತ ಮಂಡಳಿ, ಅಧಿಕಾರಿ ವರ್ಗ ಮತ್ತು ಸಿಬ್ಬಂದಿಯ ಶ್ರಮದಿಂದ, ಬ್ಯಾಂಕ್ ಸ್ಥಾಪನೆಯಾದ ದಿನದಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯ ಕ್ಷೇತ್ರವನ್ನು ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಹೀಗೆ 5 ಜಿಲ್ಲೆಗಳಿಗೆ ವಿಸ್ತರಿಸಿ ಮಹತ್ವದ ಸಾಧನೆಯನ್ನು ಮಾಡಿದೆ. ಶೀಘ್ರದಲ್ಲೇ ಈ ಜಿಲ್ಲೆಗಳಲ್ಲಿ ಬ್ಯಾಂಕಿನ ಶಾಖೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 16 ಶಾಖೆಗಳನ್ನು ಹೊಂದಿರುವ ಎಮ್.ಸಿ.ಸಿ. ಬ್ಯಾಂಕ್ 2022–23 ವಿತ್ತೀಯ ವರ್ಷದಲ್ಲಿ ದಾಖಲೆಯ ರೂ.12.20 ಕೋಟಿ ಲಾಭವನ್ನು ಗಳಿಸಿದೆ. 2022–23 ವಿತ್ತೀಯ ವರ್ಷದಲ್ಲಿ ಗಣನೀಯ ಪ್ರಮಾಣದಲ್ಲಿ ಬ್ಯಾಂಕಿನ ವ್ಯವಹಾರ ಪ್ರಗತಿಯನ್ನು ದಾಖಲಿಸಿದ್ದು, ಬ್ಯಾಂಕಿನ ನಿವ್ವಳ ಮೌಲ್ಯ ರೂ. 46 ಕೋಟಿಯಿಂದ ರೂ.59 ಕೋಟಿಗೆ ತಲುಪಿದೆ. ಬ್ಯಾಂಕಿನ ವ್ಯವಹಾರ ರೂ. 933.21 ಕೋಟಿ ತಲುಪಿದೆ.

ಬ್ಯಾಂಕಿನ ಇತಿಹಾಸದಲ್ಲೆ 2002-23ನೇ ವಿತ್ತೀಯ ವರ್ಷದಲ್ಲಿ ಮೊದಲ ಬಾರಿಗೆ ಸ್ಥಾಪಕರ ದಿನಾಚರಣೆಯನ್ನು ಬ್ಯಾಂಕಿನಲ್ಲಿ ಸಂಭ್ರಮೋಲ್ಲಾಸದಿಂದ ಆಚರಿಸುವುದರ ಜೊತೆಗೆ, ನವೀಕೃತ ಸಭಾಭವನಕ್ಕೆ ಸ್ಥಾಪಕರ ಹೆಸರು ಇಡಲಾಯಿತು. ಎಲ್ಲಾ 16 ಶಾಖೆಗಳಲ್ಲಿ ಗ್ರಾಹಕರ ಸಮಾವೇಶಗಳನ್ನು ಏರ್ಪಡಿಸಿ, ಬ್ಯಾಂಕಿನ ಸೇವೆಯ ಬಗ್ಗೆ ಗ್ರಾಹಕರ ಸಲಹೆ ಸೂಚನೆ ಪಡೆಯಲಾಯಿತು.

ಬ್ಯಾಂಕಿನ ಶತಮಾನೋತ್ತರ ದಶಮಾನೋತ್ಸವವನ್ನು ಸಾಮಾಜಿಕ ಕಾಳಜಿಯೊಂದಿಗೆ, ಸಮಾಜದ ಅಶಕ್ತ ವರ್ಗದ ಜನರ ಚಿಕಿತ್ಸೆಗೆ, ವಸತಿ ನಿವೇಶನ ದುರಸ್ತಿಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಗೂ ಹೆಣ್ಣು ಮಕ್ಕಳ ವಿವಾಹದ ವೆಚ್ಚಕ್ಕೆ ನೆರವು ನೀಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಬ್ಯಾಂಕಿನ ಸದಸ್ಯರು ಬ್ಯಾಂಕಿನ ಪ್ರಸಕ್ತ ಆಡಳಿತ ಮಂಡಳಿಗೆ ನೀಡಿದ ಬೆಂಬಲ, ಗ್ರಾಹಕರ ವಿಶ್ವಾಸ ಮತ್ತು ಅಧಿಕಾರಿವರ್ಗ ಮತ್ತು ಸಿಬ್ಬಂದಿಯ ಶ್ರಮದಿಂದ ಇಂತಹ ಸಾಧನೆ ಸಾಧ್ಯವಾಗಿದೆ. ಜೊತೆಗೆ ಸಾಕಷ್ಟು ಅನಿವಾಸಿ ಭಾರತೀಯರು ಬ್ಯಾಂಕಿನಲ್ಲಿ ವ್ಯವಹಾರ ಮತ್ತು ಹೂಡಿಕೆಯನ್ನು ಮಾಡಿದ್ದಾರೆ ಎಂದು ಆಡಳಿತ ಮಂಡಳಿ ಹೇಳಿದೆ.

ಅನಿಲ್ ಲೋಬೊ – ಅಧ್ಯಕ್ಷರು, ಜೆರಾಲ್ಡ್ ಜೂಡ್ ಡಿಸಿಲ್ವ – ಉಪಾಧ್ಯಕ್ಷರು, ಸುನಿಲ್ ಮಿನೇಜಸ್ – ಮಹಾ ಪ್ರಬಂಧಕರು. ಸದಸ್ಯರಾದ – ಆಂಡ್ರೂ ಡಿಸೊಜಾ, ಡಾ.ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ. ರೊಡ್ರಿಗಸ್, ಡೇವಿಡ್ ಡಿಸೊಜಾ, ಎಲ್ರೊಯ್ ಕಿರಣ್ ಕ್ರಾಸ್ಟೊ, ಹೆರಾಲ್ಡ್ ಮೊಂತೆರೊ, ರೋಶನ್ ಡಿಸೊಜಾ, ಮಾರ್ಸೆಲ್ ಡಿಸೊಜಾ, ಸಿ.ಜಿ. ಪಿಂಟೊ, ಸುಶಾಂತ್ ಸಲ್ಡಾನ್ಹಾ, ಐರಿನ್ ರೆಬೆಲ್ಲೊ, ಡಾ. ಫ್ರೀಡಾ ಡಿಸೊಜಾ, ಆಲ್ವಿನ್ ಪಿ. ಮೊಂತೆರೊ, ಫೆಲಿಕ್ಸ್ ಡಿಕ್ರೂಜ್, ಹಾಗೂ ಶರ್ಮಿಳಾ ಮಿನೇಜಸ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

See also  ದೇಶದಲ್ಲಿ ತುಘಲಕ್ ದರ್ಬಾರ್: ದಿನೇಶ್ ಗುಂಡೂರಾವ್

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು