ಬಂಟ್ವಾಳ: ಪಾದಾಚಾರಿ ಮಹಿಳೆಯೋರ್ವಳಿಗೆ ಕಾರು ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಆಕೆ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಅಸುನೀಗಿದ ಘಟನೆ ವಗ್ಗ ಎಂಬಲ್ಲಿ ಎಂಬಲ್ಲಿ ನಡೆದಿದೆ. ಕಾಡಬೆಟ್ಟು ನಿವಾಸಿ ಸೇಸಮ್ಮ ಮೃತಪಟ್ಟ ಮಹಿಳೆ. ಸೇಸಮ್ಮ ಅವರು ಮನೆಯಿಂದ ವಗ್ಗ ಪೇಟೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿದೆ. ಬಡಕುಟುಂಬದ ಮಹಿಳೆಯಾಗಿರುವ ಈಕೆ ಸ್ವಸಹಾಯ ಸಂಘದ ಹಣವನ್ನು ಪಾವತಿ ಮಾಡಲು ಬರುತ್ತಿದ್ದ ವೇಳೆ ಮಂಗಳೂರಿನ ಕಡೆ ಪ್ರಯಾಣ ಕಾರು ಹಿಂಬದಿಯಿಂದ ಡಿಕ್ಕಿಯಾಗಿದೆ. ಗಂಭೀರವಾದ ಗಾಯಗಳಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಹಿಳೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿಲು ಕೊಂಡುಹೋಗಲಾಯಿತಾದರೂ ದಾರಿಮಧ್ಯೆ ಅಸುನೀಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಇದೀಗ ಅದೇ ಕುಟುಂಬಕ್ಕೆ ಮತ್ತೆ ಶಾಕ್ ಉಂಟಾಗಿದೆ. ಸ್ಥಳಕ್ಕೆ ಟ್ರಾಫಿಕ್ ಎಸ್,ಐ ಮೂರ್ತಿ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ