News Kannada
Friday, June 02 2023
ಕರಾವಳಿ

ಬೆಳ್ತಂಗಡಿ: ಚಾರ್ಮಾಡಿ, ಕಡಿರುದ್ಯಾವರದಲ್ಲಿ ಕಾಡಾನೆ ಹಾವಳಿ

Belthangadi: Deforestation in Charmadi, Kadirudyavar
Photo Credit :

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಹೊಸಮಠ ಪರಿಸರದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿದ ಘಟನೆ ನಡೆದಿದೆ. ಹೊಸಮಠ ಪರಿಸರದ ಚಂದ್ರನ್ ಎಂಬವರ ಕೃಷಿತೋಟದಲ್ಲಿ 114 ಅಡಕೆ ಮರ, ಸಿಂಧೂ ರವಿ ಅವರ ತೋಟದ 36 ಅಡಕೆ ಮರ ಹಾಗೂ ಪುರುಷೋತ್ತಮ್ ಎಂಬುವರ ತೋಟದ 33 ಅಡಕೆ ಮರಗಳನ್ನು ಮುರಿದು ಹಾಕಿದೆ. ಕಾಡಾನೆಗಳು ಚಾರ್ಮಾಡಿ- ಕನಪಾಡಿ ಮೀಸಲು ಅರಣ್ಯದಿಂದ ಮೃತ್ಯುಂಜಯ ನದಿ ಮೂಲಕ ಆಗಮಿಸಿ, ಕೃಷಿ ನಾಶಗೊಳಿಸಿದ ಬಳಿಕ ಅದೇ ಹಾದಿಯಲ್ಲಿ ಅರಣ್ಯದ ಕಡೆ ನಿರ್ಗಮಿಸಿರುವ ಕುರುಹುಗಳು ಪತ್ತೆಯಾಗಿವೆ. ಈ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಪರಿಸರದಲ್ಲಿ ಪರಿಶೀಲನೆ ನಡೆಸಿ ಪರಿಹಾರ ಮಂಜೂರಾತಿಗೆ ಅರ್ಜಿ ಸಲ್ಲಿಸಲು ಮಾಹಿತಿ ನೀಡಿದೆ.

ಕಡಿರುದ್ಯಾವರ ಒಂಟಿ ಸಲಗ: ಬುಧವಾರ ತಡರಾತ್ರಿ ಕಡಿರುದ್ಯಾವರ ಗ್ರಾಮದ ಸಿರಿಬೈಲು ಕಿರಣ ಹೆಬ್ಬಾರ್ ರವರ ತೋಟಕ್ಕೆ ದಾಳಿ ನಡೆಸಿದ ಒಂಟಿ ಸಲಗ ಸುಮಾರು 15ಕ್ಕಿಂತ ಅಧಿಕ ಬಾಳೆ ಗಿಡಗಳನ್ನು ಧ್ವಂಸಗೈದಿದೆ. ಕಳೆದ ಎರಡು ದಿನಗಳ ಹಿಂದೆ ಇಲ್ಲಿಗೆ ಸಮೀಪದ ಇನ್ನೊಬ್ಬ ಕೃಷಿಕರ ತೋಟಕ್ಕೆ ಒಂಟಿ ಸಲಗ ಆಗಮಿಸಿದ್ದರು ಹೆಚ್ಚಿನ ಕೃಷಿ ನಾಶ ಮಾಡಿರಲಿಲ್ಲ. ಬುಧವಾರ ಸಂಜೆ ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಬದಿ ಕಂಡು ಬಂದ ಒಂಟಿ ಸಲಗ ಹಲವು ಹೊತ್ತು ಟ್ರಾಫಿಕ್ ಜಾಮ್ ಗೆ ಕಾರಣವಾಗಿತ್ತು.

See also  ಧರ್ಮಸ್ಥಳಕ್ಕೆ ಬಿಬಿಎಂಪಿಯಿಂದ ಕುಡಿಯುವ ನೀರು ಹಸ್ತಾಂತರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು