News Kannada
Wednesday, March 22 2023

ಕಾಸರಗೋಡು

ಹೊಂಡಕ್ಕೆ ಬಿದ್ದು ಮೃತಪಟ್ಟ ಬಾಲಕಿ

Photo Credit :
ಕಾಸರಗೋಡು : ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಬಾಲಕಿಯೋರ್ವಳು ಮೃತಪಟ್ಟ ದಾರುಣ ಘಟನೆ ನಗರ ಹೊರವಲಯದ ಚೆರ್ಕಳ ದಲ್ಲಿ  ನಡೆದಿದೆ.
ಮಧೂರು ಅರಂತ್ತೋಡಿನ  ಫಿರೋಜ್ – ತಾಹಿರಾ ದಂಪತಿ ಪುತ್ರ ಫಾತಿಮಾ ( 11) ಮೃತಪಟ್ಟ ಬಾಲಕಿ. ಚೆರ್ಕಳ ಬಂಬ್ರಾಣಿ ಯಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದಾಗ ಈ  ಘಟನೆ ನಡೆದಿದೆ.
ಮನೆ ಸಮೀಪ ನಿರ್ಮಾಣ ಹಂತದಲ್ಲಿರುವ ಮನೆ ಪರಿಸರದಲ್ಲಿ ತೆಗೆಯಲಾಗಿದ್ದ  ಹೊಂಡಕ್ಕೆ ಆಕ್ಮಸ್ಮಿಕವಾಗಿ ಬಿದ್ದು ಈ ದುರ್ಘಟನೆ ನಡೆದಿದೆ.  ಎರಡು ದಿನಗಳಿಂದ ಮಳೆ ಸುರಿದಿದ್ದರಿಂದ ಈ ಹೊಂಡದಲ್ಲಿ ನೀರು ತುಂಬಿತ್ತು.
ಹೊಂಡಕ್ಕೆ ಬಿದ್ದಿದ್ದ ಫಾತಿಮಾ ಳನ್ನು  ಮೇಲಕ್ಕೆತ್ತಿ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ . ಈಕೆ ಕಾಸರಗೋಡು ಸರಕಾರಿ ಹಯರ್ ಸೆಕಂಡರಿ ಶಾಲಾ ಆರನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ವಿದ್ಯಾನಗರ ಠಾಣಾ ಪೊಲೀಸರು ಮಹಜರು ನಡೆಸಿದ್ದು , ಕಾಸರಗೋಡು ;ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು  ಸಂಬಂಧಿಕರಿಗೆ  ಕೊಡಲಾಯಿತು.
See also  ಕೊಲೆ ಪ್ರಕರಣ ಸಂಬಂಧಪಟ್ಟಂತೆ ಆರೋಪಿಯ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು