ಕಾಸರಗೋಡು : ಪತ್ನಿಯನ್ನು ಪತಿಯು ಕಡಿದು ಕೊಲೆಗೈದ ಘಟನೆ ಬೇಡಡ್ಕ ಠಾಣಾ ವ್ಯಾಪ್ತಿಯ ಪೆರ್ಲಡ್ಕದಲ್ಲಿ ನಡೆದಿದ್ದು ,ಇಂದು ಬೆಳಿಗ್ಗೆ ಕೃತ್ಯ ಬೆಳಕಿಗೆ ಬಂದಿದೆ.
ಪೆರ್ಲಡ್ಕ ಪೇಟೆಯ ಕ್ವಾಟರ್ಸ್ ನಲ್ಲಿ ವಾಸವಾಗಿ ರುವ ಉಷಾ ( 35) ಕೊಲೆಗೀಡಾದವರು. ಕೃತ್ಯಕ್ಕೆ ಸಂಬಂಧಪಟ್ಟಂತೆ ಪತಿ ಅಶೋಕ್ ನನ್ನು ಬೇಕಲ ಠಾಣಾ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು , ವಿಚಾರಣೆ ನಡೆಸುತ್ತಿದ್ದಾರೆ. ಕೃತ್ಯದ ಬಳಿಕ ಕ್ವಾಟರ್ಸ್ ಗೆ ಬೀಗ ಹಾಕಿ ಅಲ್ಲಿಂದ ತೆರಳಿದ್ದ ಅಶೋಕ್ ನನ್ನು ಇಂದು ಬೆಳಿಗ್ಗೆ ಕಾಸರಗೋಡು ರೈಲ್ವೆ ನಿಲ್ದಾಣ ಪರಿಸರದಿಂದ ವಶಕ್ಕೆ ತೆಗೆದುಕೊಳ್ಳಲಾಗಿದೆ . ಇಂದು ಮುಂಜಾನೆ ಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ .
ಅಯ್ಯಪ್ಪ ವ್ರತಧಾರಿಯಾಗಿದ್ದ ಅಶೋಕ್ ಬೆಳಿಗ್ಗೆ ಭಜನಾ ಮಂದಿರಕ್ಕೆ ತಲುಪದ ಹಿನ್ನಲೆಯಲ್ಲಿ ಸ್ನೇಹಿತರು ಕ್ವಾಟರ್ಸ್ ಗೆ ತಲಪಿದಾಗ ಕೃತ್ಯ ಬೆಳಕಿಗೆ ಬಂದಿದೆ .ಕ್ವಾಟರ್ಸ್ ಗೆ ಬೀಗ ಜಡಿದ ಸ್ಥಿತಿಯಲ್ಲಿತ್ತು . ಕಿಟಿಕಿ ಮೂಲಕ ಗಮನಿಸಿದಾಗ ಕೃತ್ಯ ಬೆಳಕಿಗೆ ಬಂದಿತ್ತು . ಬಳಿಕ ಪರಿಸರವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಮೃತದೇಹದ ಮಹಜರು ನಡೆಸಿದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಕೃತ್ಯಕ್ಕೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಅಶೋಕ್ ಕೆಲ ಸಮಯದಿಂದ ಮಾನಸಿಕ ಅಸ್ವಸ್ಥತೆ ತೋರಿಸುತ್ತಿದ್ದ ಎಂದು ಪರಿಸರವಾಸಿಗಳು ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ
ಪೆರ್ಲಡ್ಕದಲ್ಲಿ ಪತ್ನಿಯನ್ನು ಕಡಿದು ಕೊಲೆಗೈದ ಪತಿ!
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.