ಕಾಸರಗೋಡು: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಪರಾರಿಯಾದ ಘಟನೆಗೆ ಸಂಬಂಧಪಟ್ಟಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಕಣ್ಣೂರು ಸಶಸ್ತ್ರ ಮೀಸಲು ಪಡೆಯ ಎಎಸ್ಐ ಸಜೀವನ್, ಜಶೀರ್ ಮತ್ತು ಅರುಣ್ ರನ್ನು ಅಮಾನತುಗೊಳಿಸಿ ಡಿಐಜಿ ರಾಹುಲ್ ಆರ್ ನಾಯರ್ ಆದೇಶ ಹೊರಡಿಸಿದ್ದಾರೆ .
ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಕ್ರಮ ತೆಗೆದುಕೊಳ್ಳಲಾಗಿದೆ. ಸೋಮವಾರ ಬೆಳಿಗ್ಗೆ ವಿದ್ಯಾನಗರ ಬಿ. ಸಿ ರೋಡ್ ನಲ್ಲಿ ಘಟನೆ ನಡೆದಿತ್ತು. ಮಾದಕ ವಸ್ತು ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿ ಕಣ್ಣೂರು ಸೆಂಟ್ರಲ್ ಜೈಲಿನಲ್ಲಿದ್ದ ಆಲಂಪಾಡಿಯ ಅಮೀರಾಲಿ ( ೨೩) ಎಂಬ ಆರೋಪಿಯನ್ನು ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಕಾಸರಗೋಡು ನ್ಯಾಯಾಲಯಕ್ಕೆ ಹಾಜರು ಪಡಿಸಲು ಕರೆತರುತ್ತಿದ್ದಾಗ ಪೊಲೀಸರ ಗಮನ ಬೇರೆಡೆ ಸೆಳೆದು ಪರಾರಿಯಾಗಿದ್ದನು.
ಈತನಿಗಾಗಿ ಶೋಧ ಮುಂದುವರಿಯುತ್ತಿದ್ದು, ಇನ್ನೂ ಪತ್ತೆಹಚ್ಚಲು ಸಾಧ್ಯವಾಗಿಲ್ಲ.