News Kannada
Friday, September 29 2023
ಕಾಸರಗೋಡು

ಕಾಸರಗೋಡು: ಅಧಿಕಾರಿಗಳು, ರಾಜಕೀಯ ಮುಖಂಡರಿಗೆ ಬೆದರಿಕೆ ಹಾಕುತ್ತಿದ್ದ ವ್ಯಕ್ತಿ ಬಂಧನ

Kasargod: Man arrested for threatening officials, political leaders
Photo Credit :

ಕಾಸರಗೋಡು: ಹಿರಿಯ ಪೊಲೀಸ್ ಅಧಿಕಾರಿ, ಜಿಲ್ಲಾಧಿಕಾರಿ ಹಾಗೂ ರಾಜಕೀಯ ಪಕ್ಷಗಳ ಮುಖಂಡರನ್ನು ನಕಲಿ ನಂಬ್ರ ಮೂಲಕ ಮೊಬೈಲ್ ನಲ್ಲಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.

ತೃಶ್ಯೂರ್ ಮರತ್ತನ್ ಕೋಡ್ ನ ಕೆ.ಎಂ ಹಬೀಬ್ ರಹಮಾನ್( ೨೯) ಬಂಧಿತ. ಸಾಮಾಜಿಕ ಜಾಲಗಳಲ್ಲಿ ಈತ ಮರ್ಲಿ ಎಂದು ಹೆಸರನ್ನಿಟ್ಟುಕೊಂಡಿದ್ದ ಈತ ನಕಲಿ ಸಂಖ್ಯೆಗಳನ್ನು ಬಳಸಿ ವಾಟ್ಸಾಪ್ ಗ್ರೂಫ್ ಗಳನ್ನು ರಚಿಸಿದ್ದನು. ಅಲ್ಲದೆ ಅನೇಕ ವಿದ್ಯಾರ್ಥಿಗಳನ್ನು, ಯುವಕರನ್ನು ಸದಸ್ಯರನ್ನಾಗಿ ಮಾಡಿಕೊಂಡಿದ್ದನು . ಈತ ವಿದೇಶದಲ್ಲಿದ್ದು ಕೊಂಡು ಅಧಿಕಾರಿಗಳು, ರಾಜಕೀಯ ಪಕ್ಷದ ಮುಖಂಡರು ಮತ್ತು ಜನಪ್ರತಿನಿಧಿಗಳ ಮೊಬೈಲ್ ಗೆ ಕರೆ ಮಾಡಿ ನಿಂದಿಸಿ ಬೆದರಿಕೆ ಹಾಕುತ್ತಿದ್ದನು.

ಈತ ಕರೆಯ ಧ್ವನಿಯನ್ನು ಬಳಿಕ ವಾಟ್ಸಾಪ್ ಹಾಗೂ ಸಾಮಾಜಿಕ ಜಾಲ ತಾಣಗಳ ಮೂಲಕ ಪ್ರಚಾರ ಪಡಿಯುತ್ತಿದ್ದನು. ಈ ಬಗ್ಗೆ ನಿಗಾ ಇರಿಸಿದ್ದ ಪೊಲೀಸರು ಮೂಲವನ್ನು ಪತ್ತೆ ಹಚ್ಚಿ ಆರೋಪಿ ವಿದೇಶದಿಂದ ಊರಿಗೆ ಆಗಮಿಸುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

See also  ಬೆಂಗಳೂರು: ಅಂಧರ ಟಿ20 ವಿಶ್ವಕಪ್'ಗೆ ತರಬೇತಿ ಶಿಬಿರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು