ಕಾಸರಗೋಡು: ಆಟೋ ರಿಕ್ಷಾ ಚಾಲಕನೋರ್ವ ಮನೆ ಸಮೀಪ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ. ಕುಡ್ಪoಗುಯಿ ಕಡಾರ್ ಪಳ್ಳದ ಅಬ್ದುಲ್ ಸಲಾಂ (27) ಮೃತ ಪಟ್ಟವರು.
ನಾಪತ್ತೆಯಾದುದರಿಂದ ಶೋಧ ನಡೆಸಿದಾಗ ಮನೆ ಸಮೀಪದ ಮರವೊಂದರಲ್ಲಿ ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಬದಿಯಡ್ಕ ಪೊಲೀಸರು ಮಹಜರು ನಡೆಸಿದ್ದು, ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಾಯಿತು. ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.