ಕಾಸರಗೋಡು : ಎರಡು ತಿಂಗಳ ಬೇಸಿಗೆ ರಜೆ ಬಳಿಕ ಕೇರಳದಲ್ಲಿ ಶಾಲೆಗಳು ಗುರುವಾರ ಪುನರಾರಂಭಗೊಂಡಿತು ಶಾಲೆಗಳಲ್ಲಿ ಪ್ರವೇಶೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮಂಜೇಶ್ವರ ಸರಕಾರಿ ವೆಲ್ಫೇರ್ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಶಾಲಾ ಪ್ರವೇಶೋತ್ಸವವನ್ನು ಶಾಸಕ ಎಕೆಎಂ ಅಶ್ರಫ್ ಉದ್ಘಾಟಿಸಿದರು. ಶಾಸಕ ಎ.ಕೆ.ಎಂ.ಅಶ್ರಫ್ ಮಾತನಾಡಿ, ಶಾಲೆಯ ಅಭಿವೃದ್ಧಿಗೆ ಶಾಸಕರ ನಿಧಿಯಿಂದ 10 ಲಕ್ಷ ರೂ. ಮೀಸಲಿಡುವುದಾಗಿ ಹೇಳಿದರು.
ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಜೀನ್ ಲವೀನಾ ಮೊಂತೆರೊ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷೆ ಶಮೀನಾ ಟೀಚರ್, ಜಿಲ್ಲಾ ಪಂಚಾಯತ್ ಸದಸ್ಯ ಗೋಲ್ಡನ್ ಅಬ್ದುಲ್ ರಹ್ಮಾನ್, ಮಂಜೇಶ್ವರ ಬ್ಲಾಕ್ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶಂಶೀನಾ, ಕಾಸರಗೋಡು ಡಿಪಿಓ ಡಿ.ನಾರಾಯಣ ಮುಖ್ಯ ಅತಿಥಿಗಳಾಗಿದ್ದರು.
ಮಂಜೇಶ್ವರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಹಮ್ಮದ್ ಸಿದ್ದೀಕ್, ಶಿಕ್ಷಣ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸುಪ್ರಿಯಾ ಶೆಣೈ, ಕ್ಷೇಮಾಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಯಾದವ್ ಬಡಾಜೆ, ಮಂಜೇಶ್ವರ ಎಇಒ ವಿ.ದಿನೇಶ, ಬಿಪಿಸಿ ಮಂಜೇಶ್ವರ ಬಿಆರ್ಸಿ ಪಿ.ವಿಜಯ ಕುಮಾರ್, ಮಂಜೇಶ್ವರ ಸಿಐ ಸಂತೋಷ್ ಕುಮಾರ್, ಮಂಜೇಶ್ವರ ಗ್ರಾ.ಪಂ ಸದಸ್ಯ ರಾಜೇಶ್, ಬಿ.ಆರ್.ಸಿ. ಮಂಜೇಶ್ವರಂ ತರಬೇತುದಾರ ಜಾಯ್, ನಿವೃತ್ತ ಶಿಕ್ಷಕರಾದ ಎಂ.ಜಯಂತ, ಶಿಕ್ಷಣ ತಜ್ಞ ಯು.ಪುರುಷೋತ್ತಮ ದಾಸ್ ಮತ್ತಿತರರು ಉಪಸ್ಥಿತರಿದ್ದರು.
ಜಿ.ಡಬ್ಲ್ಯೂ.ಎಲ್.ಪಿ.ಎಸ್ ಶಾಲೆಯ ಮುಖ್ಯ ಶಿಕ್ಷಕ ಎ.ಸುಕೇಶ್ ಸ್ವಾಗತಿಸಿ, ಶಾಲಾ ಶಿಕ್ಷಕಿ ಸೋನಿಯಾ ಜ್ಯೋತಿ ವಂದಿಸಿದರು.