News Karnataka Kannada
Wednesday, April 24 2024
Cricket
ಕಾಸರಗೋಡು

ಕಾಸರಗೋಡು: ಜನಸಾಮಾನ್ಯರ ಸಮಸ್ಯೆ ಪರಿಹರಿಸಲು ಸರಕಾರ ಬದ್ಧವಾಗಿದೆ

The government is committed to solve the problems of the common man.
Photo Credit : By Author

ಕಾಸರಗೋಡು: ಜನಸಾಮಾನ್ಯರ ಸಮಸ್ಯೆ ಪರಿಹರಿಸಲು ಸರಕಾರ ಬದ್ಧವಾಗಿದೆ ಎಂದು ಕೇರಳ ಲೋಕೋಪಯೋಗಿ ಸಚಿವ ಪಿ.ಎ.ಮುಹಮ್ಮದ್ ರಿಯಾಜ್ ಹೇಳಿದರು.

ಅವರು ಶನಿವಾರ ಕಾಸರಗೋಡು,ತಾಲೂಕು ಅದಾಲತ್ ಉದ್ಘಾಟಿಸಿ ಮಾತನಾಡುತ್ತಿದ್ದರು. ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ಪರಿಹಾರ ಕಲ್ಪಿಸುವ ಉದ್ದೇಶ ರಾಜ್ಯ ಸರ್ಕಾರದ್ದಾಗಿದೆ. ಎಲ್ಲಾ ಇಲಾಖೆಗಳ ಸಚಿವರು ಹಂತ ಹಂತವಾಗಿ ಜನರಿಂದ ನೇರವಾಗಿ ಸಮಸ್ಯೆ ಆಲಿಸಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಇಂತಹ ಅದಾಲತ್ ಗಳನ್ನು ಆಯೋಜಿಸಲಾಗಿದೆ. ಇದರ ಜೊತೆಗೆ ಸಮಸ್ಯೆಗಳ ಇತ್ಯರ್ಥಕ್ಕ್ಕೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜಿಲ್ಲೆಯಲ್ಲಿ ವಿಶೇಷ ತಂಡ ರಚಿಸಲಾಗಿದೆ ಎಂದು ಹೇಳಿದರು.

ಕಾಸರಗೋಡು ನಗರಸಭಾಂಗಣದಲ್ಲಿ ನಡೆದ ಅದಾಲತ್ ನ ಅಧ್ಯಕ್ಷತೆಯನ್ನು ಶಾಸಕ ಎನ್.ಎ ನೆಲ್ಲಿಕುನ್ನು ವಹಿಸಿದ್ದರು.

ಬಂದರು ಸಚಿವ ಸಚಿವ ಅಹ್ಮದ್ ದೇವರ್ ಕೋವಿಲ್ ಮಾತನಾಡಿದರು. ಶಾಸಕ ಸಿ.ಎಚ್.ಕುಂಞ೦ಬು, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪಿ.ಬೇಬಿ ಬಾಲಕೃಷ್ಣನ್, ಜಿಲ್ಲಾಧಿಕಾರಿ ಕೆ.ಇಂ ಬಾಶೇಖರ್, ಕಾಸರಗೋಡು ಪುರಸಭೆ ಉಪಾಧ್ಯಕ್ಷೆ ಸಿ.ಎ.ಸೈಮಾ, ಕಾಡಡ್ಕ ಬ್ಲಾಕ್ ಪಂಚಾಯತ್ ಅಧ್ಯಕ್ಷ ಸಿ.ಜಿ.ಮ್ಯಾಥ್ಯೂ,ಕುಂಬ್ಡಾಜೆ ಪಂಚಾಯತ್ ಅಧ್ಯಕ್ಷ ಪಿ.ಹಮೀದ್, ಕುತ್ತಿಕೋಲ್ ಪಂಚಾಯತ್ ಅಧ್ಯಕ್ಷ ಎಚ್.ಮುರಳಿ, ಮುಳಿಯಾರ್ ಪಂಚಾಯತ್ ಅಧ್ಯಕ್ಷ ಪಿ.ವಿ.ಮಿನಿ, ಬೇಡಡ್ಕ ಪಂಚಾಯತ್ ಅಧ್ಯಕ್ಷೆ ಎಂ.ಧನ್ಯ, ಕಾಸರಗೋಡು ಪುರಸಭೆ ಸದಸ್ಯೆ ವಿಮಲಾ ಶ್ರೀಧರ, ವಿವಿಧ ರಾಜಕೀಯ ಪಕ್ಷಗಳ ಮುಖಂಡರಾದ ಎಂ.ವಿ.ಬಾಲಕೃಷ್ಣನ್,ಟಿ.ಕೃಷ್ಣನ್, ಕರುಣ್ ತಾಪ, ಸಿ.ಎಂ.ಎ.ಜಲೀಲ್, ಬಿ.ಅಬ್ದುಲ್ ಗಫೂರ್, ನ್ಯಾಷನಲ್ ಅಬ್ದುಲ್ಲಾ ಮಾತನಾಡಿದರು. ಎಡಿಎಂ ಕೆ.ನವೀನ್ ಬಾಬು ಸ್ವಾಗತಿಸಿ, ಕಂದಾಯ ವಿಭಾಗಾಧಿಕಾರಿ ಅತುಲ್ ಎಸ್. ನಾಥ್ ವಂದಿಸಿದರು. ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಂದಾಯ ಉಪ ಅಧಿಕಾರಿಗಳು, ಜನಪ್ರತಿನಿಧಿಗಳು ಮೊದಲಾದ ವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು