News Karnataka Kannada
Wednesday, April 24 2024
Cricket
ಕರಾವಳಿ

ಕುಂದಾಪುರ: ಮನೆಯಂಗಳದಲ್ಲಿ ಇದ್ದ ಕಾರಿಗೆ ಟೋಲ್ ಹಣ ಕಡಿತ

Kundapur: Reduction of toll fee for cars in household
Photo Credit :

ಕುಂದಾಪುರ: ಮನೆಯಂಗಳದಲ್ಲಿ ಇದ್ದ ಕಾರಿಗೆ ಟೋಲ್ ಹಣ ಕಡಿತವಾದ  ಘಟನೆ ಸಂಭವಿಸಿದೆ. ಯಡಾಡಿ ಮತ್ಯಾಡಿ ಗ್ರಾಮದ ಗುಡ್ಡೆಅಂಗಡಿಯ ವರ್ತಕ ರಾಘವೇಂದ್ರ ಬ್ರಹ್ಮರಕೂಟ್ಟುಟೋಲ್ ಪ್ರಭು ಅವರ ಕಾರು ಮೇ 16ರಂದು ಬಿ.ಸಿ.ರೋಡ್‌ನ ಪ್ಲಾಜಾದ ಮೂಲಕ ಸಾಗಿರುವುದಾಗಿ ಹೇಳಿ ಫಾಸ್ಟಾಗ್ ವ್ಯಾಲೆಟ್‌ನಿಂದ ಹಣ ಕಡಿತವಾಗಿರುವ ಬಗ್ಗೆ ಮೊಬೈಲ್‌ ಗೆ ಸಂದೇಶ ಬಂದಿತ್ತು. ತಾಂತ್ರಿಕ ದೋಷದಿಂದ ಹೀಗಾಗಿದೆ ಎಂದು ಹೇಳಿ ಟೋಲ್‌ನವರು ಹಣವನ್ನು ಮರಳಿ ನೀಡಿದ್ದರು.

ಅದೇರೀತಿ ಕುಂದಾಪುರದ ಶಾಸ್ತ್ರಿಸರ್ಕಲ್‌ನ ಅಪ್ಸರಾ ಬ್ಯಾಗ್ ಆ್ಯಂಡ್ ಫ್ಯಾನ್ಸಿಯ ಮಾಲೀಕ ಮಹಮ್ಮದ್ ರಫೀಕ್ ಅವರ ಮೊಬೈಲ್ ಗೆ ಸಂದೇಶವೊಂದು ಬಂದಿದ್ದು, ತೆರೆದು ನೋಡಿದರೆ ಅದೇ ಬ್ರಹ್ಮರಕೂಟ್ಟು ಟೋಲ್‌ ಪ್ಲಾಜಾದ ಮೂಲಕ ಅವರ ವಾಹನ ಹಾದು ಹೋಗಿದೆ ಎಂದು 30 ರೂ. ಪೇಟಿಎಂ ವ್ಯಾಲೆಟ್‌ ನಿಂದ ಕಡಿತವಾಗಿರುವ ಮಾಹಿತಿ ಇತ್ತು. ಅವರ ಝನ್ ಎಸ್ಪಿಲೊ ವಾಹನ ಮಾತ್ರ ಅಲ್ಲೇ ಅಂಗಡಿ ಬಳಿಯಲ್ಲೇ ಇತ್ತು!
ಬಳಿಕ ಅವರು ಟೋಲ್ ಪ್ಲಾಜಾದ ನಿರ್ವಾಹಕ ನವೀನ್ ಶೆಟ್ಟಿ ಅವರನ್ನು ಸಂಪರ್ಕಿಸಿದ್ದರು.  ಸ್ವಲ್ಪ ಹೊತ್ತಿನಲ್ಲಿ ಟೋಲ್‌ನವರು ಹಣ ಮರಳಿಸಿದ್ದಾರೆ. ಆದರೆ ಇಂತಹ ಆಚಾತುರ್ಯಗಳು ಪದೇ ಪದೆ ಸಂಭವಿಸುವುದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು