News Kannada
Tuesday, October 03 2023
ಕರಾವಳಿ

ಮಂಗಳೂರು ಉತ್ತರ ಕ್ಷೇತ್ರವನ್ನು ಅಭಿವೃದ್ಧಿಯ ಎತ್ತರಕ್ಕೇರಿಸುವೆ- ಇನಾಯತ್ ಅಲಿ

Mangalore will take the North Constituency to the height of development - Inayat Ali
Photo Credit :

ಮಂಗಳೂರು: ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ  ಸೋಮವಾರದಂದು ಗುರುಪುರ ವಲಯ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ನಂತರ ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

‘ಆರ್ಥಿಕ ಸಂಕಷ್ಟ, ಬಿಜೆಪಿಯ ದುರಾಡಳಿತದಿಂದ ತತ್ತಿರಿಸಿರುವ ರಾಜ್ಯದ ಜನತೆಗೆ ಕಾಂಗ್ರೆಸ್ ಪಕ್ಷ ಗ್ಯಾರಂಟಿಗಳನ್ನು ನೀಡಿದೆ. ಇಂದು ಜನರು ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಗ್ಯಾರಂಟಿಯನ್ನು ನೀಡುತ್ತಿದ್ದಾರೆ. ವಿವಿಧ ಪಕ್ಷಗಳ ಮುಖಂಡರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ವಿಜಯ ಪತಾಕೆ ಹಾರಿಸಲಿದೆ ಎನ್ನುವುದರ ಸ್ಪಷ್ಟ ಮುನ್ಸೂಚನೆ ಇದು. ಕ್ಷೇತ್ರದಾದ್ಯಂತ ಸಂಚರಿಸಿ ಮತಯಾಚಿಸಿದ ಸಂದರ್ಭ ಮತದಾರರು ನೀಡಿದ ಬೆಂಬಲ ಅಪಾರ. ಜನರ ಭಾವನೆಗಳೊಂದಿಗೆ ಆಟವಾಡುವ ಬಿಜೆಪಿಯನ್ನು ಮತದಾರರು ತಿರಸ್ಕರಿಸುವುದು ನೂರಕ್ಕೆ ನೂರು ಸತ್ಯ. ಮಂಗಳೂರು ಉತ್ತರ ಕ್ಷೇತ್ರವನ್ನು ಅಭಿವೃದ್ಧಿಯ ಎತ್ತರಕ್ಕೇರಿಸುವ ಗ್ಯಾರಂಟಿ ನನ್ನದು’ ಎಂದು ಇನಾಯತ್ ಅಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

See also  ಕಾರವಾರ: ಬಾಲಮಂದಿರ ಪ್ರೌಢ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು