News Karnataka Kannada
Friday, April 19 2024
Cricket
ಮಂಗಳೂರು

ಎಡ, ಜಾತ್ಯಾತೀತ ಪಕ್ಷಗಳು ಹಾಗೂ ವಿವಿಧ ಸಂಘಟನೆಗಳಿಂದ ನಾರಾಯಣ ಗುರುಗಳ ಭಾವಚಿತ್ರದ ಮೆರವಣಿಗೆ 

Narayana Guru
Photo Credit :

ಕೇರಳ ಸರಕಾರ ಕಳುಹಿಸಿಕೊಟ್ಟಿದ್ದ ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಗಣರಾಜ್ಯೋತ್ಸವದ ಪರೇಡ್ ನಲ್ಲಿ ಅವಕಾಶ ನೀಡದೆ ಅವಮಾನಿಸಿರುವ ಕೇಂದ್ರದ ಬಿಜೆಪಿ ಸರಕಾರದ ಕ್ರಮವನ್ನು ಖಂಡಿಸಿ ಜನವರಿ 26 ಗಣರಾಜ್ಯೋತ್ಸವದ ದಿನದಂದು ಸಂಜೆ 3ಕ್ಕೆ ಮಂಗಳೂರಿನ ಕ್ಲಾಕ್ ಟವರ್ ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ನಾರಾಯಣ ಗುರುಗಳ ಭಾವಚಿತ್ರದ ಮೆರವಣಿಗೆ, ಗೌರವ ಸಲ್ಲಿಕೆಯನ್ನು ಎಡ, ಜಾತ್ಯಾತೀತ ಪಕ್ಷಗಳು ಹಾಗು ವಿವಿಧ ಸಂಘಟನೆಗಳು ಜಂಟಿಯಾಗಿ ಹಮ್ಮಿಕೊಂಡಿವೆ.

ನಾರಾಯಣ ಗುರುಗಳು ಜಾತಿ ತಾರತಮ್ಯ, ಅಸಮಾನತೆಯ ವಿರುದ್ದದ ಚಳವಳಿಯನ್ನು‌ ನಡೆಸಿ ಯಶಸ್ವಿಯಾದ ಆಧು‌ನಿಕ ಕಾಲದ ಮಹಾನ್ ಸಂತ.‌ ಮಹಿಳಾ ಸಮಾನತೆಗೆ ಅವರ ಕೊಡುಗೆ ಅನನ್ಯ. ಜಾತಿ ಹೆಸರಿನ ಅವಮಾನಗಳು ಸಹಜ ಎಂಬಂತೆ ಸ್ವೀಕರಿಸಲ್ಪಡುತ್ತಿದ್ದ ಕಾಲಘಟ್ಟದಲ್ಲಿ ಅದರ ವಿರುದ್ದ ಜಾಗೃತಿಯನ್ನು ಬಡಿದೆಬ್ಬಿಸಿದ ಗುರುಗಳ ಮಹಾನ್ ಕಾರ್ಯವನ್ನು ಮನುಕುಲ ಸದಾ ಸ್ಮರಿಸುತ್ತದೆ. ಅಂತಹ ಮಹಾನ್ ಸಂತನಿಗೆ ಸೈದ್ದಾಂತಿಕ ಕಾರಣಗಳಿಗಾಗಿ ಕೇಂದ್ರದ ಬಿಜೆಪಿ ಸರಕಾರ ಅಗೌರವ ತೋರಿಸಿರುವುದು ಯಾವ ಕಾರಣಕ್ಕೂ ಮಾನ್ಯವಲ್ಲ. ನಾರಾಯಣ ಗುರುಗಳಿಗೆ ಕೇಂದ್ರ ಸರಕಾರದಿಂದ ಆಗಿರುವ ಈ ಅವಮಾನ ಜಾತಿ, ವರ್ಗ ಮೀರಿ ಜನಸಾಮಾನ್ಯರಲ್ಲಿ ಆಕ್ರೋಶವನ್ನು ಮೂಡಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸಮಾನ ಮನಸ್ಕ ಎಡ, ಜಾತ್ಯಾತೀತ ಪಕ್ಷಗಳು ಹಾಗೂ ಸಂಘಟನೆಗಳು ಕೇಂದ್ರ ಸರಕಾರದ ಈ ಕೆಟ್ಟ ಮನೋಸ್ಥಿತಿಯನ್ನು ತೀವ್ರವಾಗಿ‌ ಖಂಡಿಸುತ್ತದೆ ಹಾಗೂ ಗಣರಾಜ್ಯೋತ್ಸವದ (ಜನವರಿ 26) ಅದೇ ದಿನ ಸಂಜೆ 3ಕ್ಕೆ ಕ್ಲಾಕ್ ಟವರ್ ನಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ನಾರಾಯಣ ಗುರುಗಳ ಭಾವಚಿತ್ರದ ಮೆರವಣಿಗೆಯನ್ನು ನಡೆಸಿ ಸಾರ್ವಜನಿಕ ಗೌರವ ಸಲ್ಲಿಸಲು ನಿರ್ಧರಿಸಿದೆ. ಸಾರ್ವಜನಿಕರು ಅಂದು ಎಲ್ಲೆಡೆ ನಾರಾಯಣ ಗುರುಗಳಿಗೆ ಗೌರವ ಸಲ್ಲಿಸುವ ಮೂಲಕ ಸಮಾನತೆಯ ಸಮಾಜ ನಿರ್ಮಾಣದ ಬದ್ದತೆಯನ್ನು ಎತ್ತಿ ಹಿಡಿಯಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಎಡ, ಜಾತ್ಯಾತೀತ ಪಕ್ಷಗಳು, ದಲಿತ, ಮಹಿಳಾ, ವಿದ್ಯಾರ್ಥಿ, ಯುವಜನ‌,ರೈತ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ಪತ್ರಿಕಾ ಹೇಳಿಕೆಯೊಂದರಲ್ಲಿ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
15229
Jaya Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು