News Karnataka Kannada
Saturday, April 20 2024
Cricket
ಮಂಗಳೂರು

ಕನ್ಯಾಡಿ ಶ್ರೀಗಳ ಪಾದಪೂಜೆ ಮಾಡಿದ ಸಚಿವ ಶಿವರಾಮ ಹೆಬ್ಬಾರ್‌

Kanyadi Belthangady 14082021
Photo Credit :

ಬೆಳ್ತಂಗಡಿ: ಕನ್ಯಾಡಿ ದೇವರಗುಡ್ಡೆ ಶ್ರೀ ಗುರುದೇವ ಮಠದಲ್ಲಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಆಡಳಿತ ಸಮಿತಿ ಹಾಗೂ ಚಾತುರ್ಮಾಸ್ಯ ಸಮಿತಿ ವತಿಯಿಂದ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾ ಸಂಸ್ಥಾನಮ್ ಪೀಠಾಧೀಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ನಡೆಯುತ್ತಿದ್ದು ರಾಜ್ಯ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಶನಿವಾರ ಶ್ರೀಗಳ ಚಾತುರ್ಮಾಸ್ಯದಲ್ಲಿ ಪಾಲ್ಗೊಂಡು ಪಾದಪೂಜೆ ನೆರವೇರಿಸಿದರು.

ಚಾತುರ್ಮಾಸ್ಯದಲ್ಲಿ ಕನ್ಯಾಡಿ ಶ್ರೀಗಳ ಪಾದಪೂಜೆ ನೆರವೇರಿಸಿ, ಬಳಿಕ ಮಾತನಾಡಿದ ಸಚಿವ ಶಿವರಾಮ್ ಹೆಬ್ಬಾರ್ ಅವರು,ಅನೇಕ ಸಾಧು ಸಂತರು ದೇಶದ ಕಲ್ಯಾಣಗೋಸ್ಕರ ಕಠಿಣವಾದ ಚಾತುರ್ಮಾಸ್ಯ ವ್ರತವನ್ನು ಮಾಡುತ್ತಿದ್ದಾರೆ. ಅವರು ಕೈಗೊಂಡ ವ್ರತದ ಫಲಗಳು ಭಕ್ತರಿಗೆ ತಲುಪುತ್ತದೆ. ಗುರುವಿಗೆ ಜಾತಿ, ಧರ್ಮ ಇಲ್ಲ. ಮನುಷ್ಯನ ಜೀವನದಲ್ಲಿ ಗುರು ಇರಬೇಕು. ನಮ್ಮ ಮುಂದೆ ಗುರಿ ಇದ್ದರೆ ಹಿಂದೆ ಗುರುಗಳ ಮಾರ್ಗದರ್ಶನ ಬೇಕೇ ಬೇಕು. ಯಾವಾಗಲೂ ಗುರುಗಳು ಸಮಾಜದ ಏಳಿಗೆಯನ್ನೇ ಬಯಸುವವರು. ಅವರ ಮಾರ್ಗದರ್ಶನದಿಂದ ಸಮಾಜ, ಧರ್ಮ ಎತ್ತರಕ್ಕೆ ಏರುತ್ತದೆ.‌ಸಮಾಜದಲ್ಲಿ ಶಾಂತಿ ಸುಭಿಕ್ಷೆ ನೆಲೆಯೂರುತ್ತದೆ ಎಂದ ಸಚಿವರು, ಚಾತುರ್ಮಾಸ್ಯದ ಸಾರಥ್ಯವನ್ನು ವಹಿಸಿಕೊಂಡು, ಧರ್ಮದ ಚಿಂತನೆಯನ್ನು ಮೈಗೂಡಿಸಿಕೊಂಡ ಯುವ ಶಾಸಕ ಹರೀಶ್ ಪೂಂಜ ಅವರು ಅಚ್ಚುಕಟ್ಟಾದ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ. ಗುರುಗಳ ಕೃಪಾಕಟಾಕ್ಷದಿಂದ ಸಮಾಜದ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದರು.

ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾ ಸಂಸ್ಥಾನಮ್ ಪೀಠಾಧೀಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಕ್ಷೇತ್ರದ ವತಿಯಿಂದ ಸಚಿವ ಶಿವರಾಮ್ ಹೆಬ್ಬಾರ್ ಮತ್ತು ವನಜಾಕ್ಷಿ ಹೆಬ್ಬಾರ್  ದಂಪತಿಯನ್ನು ಗೌರವಿಸಿದರು.‌

ಬೆಂಗಳೂರಿನ ಆಗಮ ಪ್ರವೀಣ ಲಕ್ಷ್ಮೀಪತಿ ಗೋಪಾಲಚಾರ್ಯರವರ ತಂಡದವರು ಪಾದಪೂಜೆ, ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಶಾಸಕ ಹರೀಶ್ ಪೂಂಜ ಸಚಿವ ದಂಪತಿಯನ್ನು ಸ್ವಾಗತಿಸಿದರು.‌

ಚಾತುರ್ಮಾಸ್ಯ ಸಮಿತಿ ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್, ಸಮಿತಿಯ ಪದಾಕಾರಿಗಳಾದ ಪ್ರಶಾಂತ್ ಪಾರೆಂಕಿ, ಶ್ರೀನಿವಾಸ್ ರಾವ್, ಗಣೇಶ್ ಗೌಡ ನಾವೂರು, ಸೀತಾರಾಮ ಬೆಳಾಲು, ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ಕೇಶವ ಬಂಗೇರ, ಶಶಿಧರ ಕಲ್ಮಂಜ,
ಕೃಷ್ಣಪ್ಪ ಗುಡಿಗಾರ್, ದರ್ಮಣ್ಣ ಗೌಡ, ರಾಘವ ಕಲ್ಮಂಜ, ಉದಯ ಹೆಗ್ಡೆ ನಾರಾವಿ ಮತ್ತಿತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು