ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವಾಂತರದಿಂದಾಗಿ ಆರೆಸ್ಸೆಸ್ ಮುಖಂಡ ಡಾ. ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ಗೋಡೆ ಜರಿದು ಬಿದ್ದ ಘಟನೆ ಗುರುವಾರ ರಾತ್ರಿ ವೇಳೆ ನಡೆದಿದೆ .
ಬಿಸಿರೋಡು ಅಡ್ಡಹೊಳೆವರೆಗೆ ಚತುಷ್ಪತ ರಸ್ತೆಯ ನಿರ್ಮಾಣದ ಕಾಮಗಾರಿ ರಾತ್ರಿಹಗಲು ಎನ್ನದೆ ವೇಗದಿಂದ ನಡೆಯುತ್ತಿದ್ದು, ಇದೇ ಸಂದರ್ಭ ಸರ್ವೀಸ್ ರಸ್ತೆ ನುರ್ಮಾಣಕಾರ್ಯವೂ ಭರದಿಂದ ಸಾಗಿದೆ. ಈ ಕಾಮಗಾರಿಯ ಸಂದರ್ಭದಲ್ಲಿ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ಗೋಡೆ ಜರಿದು ಬಿದ್ದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ರಸ್ತೆ ಅಗಲೀಕರಣ ದ ಜೊತೆ ಸರಾಗವಾಗಿ ಮಳೆ ನೀರು ಹರಿದು ಹೋಗುವ ಉದ್ದೇಶದಿಂದ ಅಲ್ಲಲ್ಲಿ ಸಿಮೆಂಟ್ ಪೈಪ್ ಲೈನ್ ಅಳವಡಿಕೆ ಕಾರ್ಯ ನಡೆಯುತ್ತಿದೆ. ಕಲ್ಲಡ್ಕ ಮುಖ್ಯಪೇಟೆಯಲ್ಲಿರುವ ಡಾ. ಭಟ್ ಅವರ ಮನೆಯ ಮುಂಭಾಗದಲ್ಲಿ ಕೂಡ ಸಿಮೆಂಟ್ ಪೈಪ್ ಅಳವಡಿಕೆ ಗಾಗಿ ಕಾಂಪೌಂಡ್ ನ ಸುತ್ತ ಅಗೆಯಲಾಗಿತ್ತು.
ಕಾಂಪೌಂಡ್ ನ ಬದಿಯಲ್ಲಿ ಮತ್ತು ಅಡಿಪಾಯ ದ ವರಗೆ ಅಗೆದ ಪರಿಣಾಮ ಜೊತೆಗೆ ಸಡಿಲ ಮಣ್ಣಿನ ಕಾರಣದಿಂದ ಕಾಂಪೌಂಡ್ ಗೋಡೆ ಜರಿದು ಬಿದ್ದಿದೆ. ಪ್ಲೈ ಓವರ್ ನ ಎರಡು ಬದಿಗಳಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಗೊಳ್ಳುತ್ತದೆ ಈಗಾಗಿ ರಸ್ತೆ ಅಗಲೀಕರಣ ದ ಸರಿಯಾದ ಸರ್ವೆ ಕಾರ್ಯ ಮುಗಿದಿಲ್ಲ ಎನ್ನುವ ಮಾತುಗಳೂ ಕೇಳಿಬಂದಿದ್ದು, ಹೆದ್ದಾರಿಇಲಾಖೆ ಶೀಘ್ರ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಬೇಕಾಗಿದೆ.