News Karnataka Kannada
Saturday, April 20 2024
Cricket
ಮಂಗಳೂರು

ಕಲ್ಲಡ್ಕ ಡಾ. ಪ್ರಭಾಕರ್ ಭಟ್’ರ ಮನೆಯ ಕಾಂಪೌಂಡ್ ಗೋಡೆ ಜರಿದು ಬಿದ್ದು ಲಕ್ಷಾಂತರ ರೂ ನಷ್ಟ

Bantwal.
Photo Credit : News Kannada
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವಾಂತರದಿಂದಾಗಿ ಆರೆಸ್ಸೆಸ್ ಮುಖಂಡ ಡಾ. ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ಗೋಡೆ ಜರಿದು ಬಿದ್ದ ಘಟನೆ ಗುರುವಾರ ರಾತ್ರಿ ವೇಳೆ ನಡೆದಿದೆ .
ಬಿಸಿರೋಡು ಅಡ್ಡಹೊಳೆವರೆಗೆ ಚತುಷ್ಪತ ರಸ್ತೆಯ ನಿರ್ಮಾಣದ ಕಾಮಗಾರಿ ರಾತ್ರಿಹಗಲು ಎನ್ನದೆ ವೇಗದಿಂದ ನಡೆಯುತ್ತಿದ್ದು, ಇದೇ ಸಂದರ್ಭ ಸರ್ವೀಸ್ ರಸ್ತೆ ನುರ್ಮಾಣಕಾರ್ಯವೂ ಭರದಿಂದ ಸಾಗಿದೆ. ಈ ಕಾಮಗಾರಿಯ ಸಂದರ್ಭದಲ್ಲಿ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ಗೋಡೆ ಜರಿದು ಬಿದ್ದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ರಸ್ತೆ ಅಗಲೀಕರಣ ದ ಜೊತೆ ಸರಾಗವಾಗಿ ಮಳೆ ನೀರು ಹರಿದು ಹೋಗುವ ಉದ್ದೇಶದಿಂದ  ಅಲ್ಲಲ್ಲಿ  ಸಿಮೆಂಟ್ ಪೈಪ್ ಲೈನ್ ಅಳವಡಿಕೆ ಕಾರ್ಯ ನಡೆಯುತ್ತಿದೆ. ಕಲ್ಲಡ್ಕ ಮುಖ್ಯಪೇಟೆಯಲ್ಲಿರುವ ಡಾ. ಭಟ್ ಅವರ ಮನೆಯ ಮುಂಭಾಗದಲ್ಲಿ ಕೂಡ ಸಿಮೆಂಟ್ ಪೈಪ್ ಅಳವಡಿಕೆ ಗಾಗಿ ಕಾಂಪೌಂಡ್ ನ ಸುತ್ತ ಅಗೆಯಲಾಗಿತ್ತು.
ಕಾಂಪೌಂಡ್ ನ ಬದಿಯಲ್ಲಿ ಮತ್ತು ಅಡಿಪಾಯ ದ ವರಗೆ ಅಗೆದ ಪರಿಣಾಮ ಜೊತೆಗೆ ಸಡಿಲ ಮಣ್ಣಿನ ಕಾರಣದಿಂದ ಕಾಂಪೌಂಡ್ ಗೋಡೆ ಜರಿದು ಬಿದ್ದಿದೆ. ಪ್ಲೈ ಓವರ್ ನ ಎರಡು ಬದಿಗಳಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಗೊಳ್ಳುತ್ತದೆ ಈಗಾಗಿ ರಸ್ತೆ ಅಗಲೀಕರಣ ದ  ಸರಿಯಾದ ಸರ್ವೆ ಕಾರ್ಯ ಮುಗಿದಿಲ್ಲ ಎನ್ನುವ ಮಾತುಗಳೂ ಕೇಳಿಬಂದಿದ್ದು,  ಹೆದ್ದಾರಿ‌ಇಲಾಖೆ ಶೀಘ್ರ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಬೇಕಾಗಿದೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು