ಬಂಟ್ವಾಳ: ಯುವಕನೋರ್ವನನ್ನು ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕಕ್ಕೆಪದವು ಸಮೀಪದ ಕೊಡ್ಯಮಲೆ ಅರಣ್ಯಪ್ರದೇಶದಲ್ಲಿ ನಡೆದಿದೆ. ರಫೀಕ್ (26) ಎಂಬಾತ ಕೊಲೆಯಾದ ಯುವಕ. ಕಕ್ಕೆಪದವು ನಿವಾಸಿ ಸಿದ್ದೀಕ್ ಎಂಬಾತ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ವೈಯಕ್ತಿಕ ದ್ವೇಷವೇ ಕೊಲೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.
ಕುಡಿದ ಮತ್ತಿನಲ್ಲಿ ಕೊಲೆಗೈದ ಯುವಕ : ಬಂಟ್ವಾಳ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.