News Karnataka Kannada
Saturday, April 27 2024
ಮಂಗಳೂರು

‘ಕೋಲ್ಮಿಂಚು, ಹನಿಗವನ ಸಂಕಲನ ಬಿಡುಗಡೆ

New Project 2021 12 05t133618.262
Photo Credit :
ಮಂಗಳೂರು:ಮಹಿಳಾ  ಸಾಹಿತಿಗಳಿಗೆ ಸಾಹಿತ್ಯದ ರಚನೆಗೆ ಕೌಟುಂಬಿಕ ವಾತಾವರಣ ಚೆನ್ನಾಗಿ ದ್ದಾಗ ಮತ್ತು ಉತ್ತಮ  ಪ್ರೋತ್ಸಾಹ ದೊರೆತಾಗ ಅವರಿಂದ ಹಲವು ಒಳ್ಳೆಯ ಕೃತಿಗಳು  ಹೊರಬರಲು ಸಾಧ್ಯ ಎಂದು ಹಿರಿಯ ಸಾಹಿತಿ , ಸಂಶೋಧಕಿ  ಬಿ.ಎಂ.ರೋಹಿಣಿ ಅಭಿಪ್ರಾಯಪಟ್ಟರು.
ಕರಾವಳಿ ಲೇಖಕಿಯರ-ವಾಚಕೀಯರ ಸಂಘ,ಚುಟುಕು ಸಾಹಿತ್ಯ ಪರಿಷತ್ತು ಮಂಗಳೂರು ಹಾಗೂ ಸುಶಾಂತ ಪ್ರಕಾಶನ ಬೆಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಉರ್ವ ಸ್ಟೋರ್ ನ ಸಾಹಿತ್ಯ ಸದನದಲ್ಲಿ  ಶನಿವಾರ ನಡೆದ ಸಮಾರಂಭದಲ್ಲಿ ನಿವೃತ್ತ ಶಿಕ್ಷಕಿ ನಳಿನಾಕ್ಷಿ ಉದಯರಾಜ್ ಅವರ ಕೃತಿ ‘ಕೋಲ್ಮಿಂಚು’ ಹನಿಗವನ ಸಂಕಲನ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
       ಮಹಿಳಾ ಸಾಹಿತಿಗಳಿಗೆ ಸಾಹಿತ್ಯಕ್ಷೇತ್ರದಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳಲು  ಅವರಿಗೆ ಕೌಟುಂಬಿಕ ಪರಿಸರ  ಅಡ್ಡಿಯಾಗಬಾರದು .ಬದುಕಿನ ಎಡರು-ತೊಡರುಗಳನ್ನು ದಾಟಿ ನಳಿನಾಕ್ಷಿ ಉದಯರಾಜ್  ಸಾಹಿತ್ಯಕ್ಷೇತ್ರದಲ್ಲಿ ಮಾಡುತ್ತಿರುವ ಸಾಧನೆ ಶ್ಲಾಘನೀಯವಾಗಿದೆ ಎಂದು  ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕರಾವಳಿ ಲೇಖಕಿಯರ-ವಾಚಕಿಯರ ಸಂಘದ ಅಧ್ಯಕ್ಷೆ ಡಾ.ಜ್ಯೋತಿ ಚೇಳ್ಯಾರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ವಿಜಯಲಕ್ಷ್ಮಿ ಕಟೀಲು ಕೃತಿಯ ಬಗ್ಗೆ ಮಾತನಾಡಿದರು.
    ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಶ್,  ಮಂಗಳೂರು ಸಂತ ಅಗ್ನೆಸ್ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಅರುಣ್ ಉಳ್ಳಾಲ್ ಶುಭ ಹಾರೈಸಿದರು. ಲೇಖಕಿ ನಳಿನಾಕ್ಷಿ ಉದಯರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು.
 ಸುಶಾಂತ ಪ್ರಕಾಶನದ ಸುಶಾಂತ್ ರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಾಹಿತಿ   ಸದಾನಂದ ನಾರಾವಿ ಸ್ವಾಗತಿಸಿದರು, ಲೇಖಕಿ ಅರುಣಾ ನಾಗರಾಜ್ ವಂದಿಸಿದರು.ಮಂಗಳೂರು ಚುಟುಕು ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ  ಸುಬ್ರಾಯ ಭಟ್ ಕಾರ್ಯಕ್ರಮ ನಿರೂಪಿಸಿದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು