ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ ಸಂಭವಿಸಿ ಕಾರಿನ ಮುಂಭಾಗ ಭಾಗಶಃ ಸುಟ್ಟು ಹೋದ ಘಟನೆ ಬುಧವಾರ ಮಧ್ಯಾಹ್ನ ಪಿವಿಎಸ್ ವೃತ್ತದ ಬಳಿ ಸಂಭವಿಸಿದೆ.
ಪಿವಿಎಸ್ ವೃತ್ತದ ಕಡೆಯಿಂದ ನವಭಾರತ ವೃತ್ತ ಕಡೆಗೆ ಹೋಗುತ್ತಿದ್ದ ಕಾರಿನ ಮುಂಭಾಗದಲ್ಲಿ ಹೊಗೆ ಕಂಡ ಚಾಲಕ ಕೂಡಲೇ ಕಾರು ನಿಲ್ಲಿಸಿದರು.
ಬಳಿಕ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದರು. ಕಾರಿನ ಮುಂಭಾಗ ಭಾಗಶಃ ಸುಟ್ಟು ಹೋಗಿದೆ. ಬ್ಯಾಟರಿ ಬಳಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಉಂಟಾಗಿರಬಹುದೆಂದು ಶಂಕಿಸಲಾಗಿದೆ.
ಘಟನೆ ವೇಳೆ ಕಾರಿನಲ್ಲಿ ಚಾಲಕ ಸಹಿತ ಇಬ್ಬರಿದ್ದರು ಎಂದು ತಿಳಿದುಬಂದಿದೆ.