News Karnataka Kannada
Thursday, April 25 2024
Cricket
ಮಂಗಳೂರು

ಜ.1 ರಂದು ಕಕ್ಯಪದವಿನಲ್ಲಿ ಸತ್ಯ-ಧರ್ಮ ಕಂಬಳ

Kambala 20092021
Photo Credit :

ಬಂಟ್ವಾಳ: ತಾಲೂಕಿನ ಉಳಿಗ್ರಾಮದ ಕಕ್ಯಪದವು ಶ್ರೀ ರಾಮಾಂಜನೇಯ ಗೆಳೆಯರ ಬಳಗ ( ರಿ.) ಮೈರ ಇದರ ಆಶ್ರಯದಲ್ಲಿ ವೇ.ಮೂ.ಶ್ರೀ.ರಾಘವೇಂದ್ರ ಭಟ್ ಕೊಡಂಬೆಟ್ ಕಾರಿಂಜ ಅವರ ಶುಭಾಶೀರ್ವಾದದೊಂದಿಗೆ ಕಕ್ಯಪದವಿನ ಮೈರ- ಬರ್ಕೆಜಾಲು ಎಂಬಲ್ಲಿ 9ನೇ ವರ್ಷದ “ಸತ್ಯ-ಧರ್ಮ” ಜೋಡುಕರೆ ಕಂಬಳ ಜ.1 ರಂದು (ಶನಿವಾರ ) ನಡೆಯಲಿದೆ.

ಕಂಬಳ ಕೋಣದ ಯಜಮಾನ ಅವಿಲ್ ಮೆನೆಜಸ್ ಅವರು ಬೆಳಿಗ್ಗೆ ಕಂಬಳಕೂಟವನ್ನು ಉದ್ಘಾಟಿಸಲಿದ್ದು, ಹಲವಾರು ಗಣ್ಯರು ಭಾಗವಹಿಸಲಿದ್ದಾರೆ.ಸಂಜೆ ಶಾಸಕರು,ಕಂಬಳಸಮಿತಿ ಗೌರವಾಧ್ಯಕ್ಷ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸಚಿವರುಗಳಾದ ಎಸ್.ಅಂಗಾರ,ಕೋಟಾ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್, ಶಾಸಕ ಹರೀಶ್ ಪೂಂಜ ಸೇರಿದಂತೆ ಉದ್ಯಮಿಗಳು,ಗಣ್ಯರು ಭಾಗವಹಿಸಲಿದ್ದಾರೆ ಎಂದು ಕಂಬಳ ಸಮಿತಿ ಅಧ್ಯಕ್ಷ ಕುಸುಮಾಧರ ಉರ್ಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕೃತರಾದ ಹಾಜಬ್ಬ ಹರೇಕಳ,ಮಾಣಿಮಜಲು ಕ್ಷೇತ್ರದ ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಲ್ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿರುವ ಅವರು ನೂರಕ್ಕು ಅಧಿಕ ಕಂಬಳದ ಓಟದ ಕೋಣಗಳು ಭಾಗವಹಿಸಲಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು