ಮಂಗಳೂರು :ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ತರಬೇತಿ ವಿದ್ಯಾರ್ಥಿ ಪ್ಯಾರಾಮೆಡಿಕಲ್ ಇಂಟರ್ನ್ ಪೂರ್ವ ಮಲಗಿದ್ದಲ್ಲಿಯೇ ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ನಡೆದಿದ್ದು ವರದಿಯಾಗಿದೆ .ಮೃತರನ್ನು ಉಪ್ಪಿನಂಗಡಿ ನಿವಾಸಿ ನಾಗೇಶ್ ಬಿಎಸ್ ಎಂದು ಗುರುತಿಸಲಾಗಿದೆ .
ಇವರು ಕೆಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಪ್ಯಾರಾಮೆಡಿಕಲ್ ಇಂಟರ್ನ್ ಆಗಿದ್ದರು. ಕಳೆದ ರಾತ್ರಿ ಕರ್ತವ್ಯದಲ್ಲಿದ್ದ ಇವರು ವಿಶ್ರಾಂತಿ ಕೊಠಡಿಗೆ ತೆರಳಿ ಮಲಗಿದ್ದವರು ಅಲ್ಲೇ ಕೊನೆಯುಸಿರೆಳಿದಿದ್ದಾರೆ.ಹೃದಯಾಘಾತಕ್ಕೊಳಗಾಗಿ ಮೃತ ಪಟ್ಟಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಲಾಗಿದೆ ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.