News Karnataka Kannada
Thursday, April 25 2024
ಮಂಗಳೂರು

ಬಿಜೆಪಿಯ ಅಭಿವೃದ್ಧಿ ಕಾರ್ಯಕ್ಕೆ ಕಾಂಗ್ರೆಸ್ ಅಡ್ಡಗಾಲು

Img 20210806 Wa0060 (1)
Photo Credit :
ಮಂಗಳೂರು : ವಾರ್ಡ್ ಸಮಿತಿ ರಚನೆಯಾದರೆ ಬಿಜೆಪಿ ಜನರಿಗೆ ಉತ್ತಮ ಆಡಳಿತ ನೀಡುತ್ತದೆ. ಬಿಜೆಪಿ ಬೆಳೆಯುತ್ತದೆ ಎನ್ನುವ ಕಾರಣಕ್ಕೆ ಅಭಿವೃದ್ಧಿ ಕೆಲಸಗಳಿಗೆ ಅಡ್ಡಗಾಲು ಹಾಕುತ್ತಿದ್ದಾರೆ. ಹಳದಿ ರೋಗ ಇದ್ದವರಿಗೆ ಊರೆಲ್ಲಾ ಹಳದಿ ಕಾಣುತ್ತದೆ ಇದೇ ಪರಿಸ್ಥಿತಿ ಜೆ.ಆರ್.ಲೊಬೋರದ್ದು ಎಂದು ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಸಚೇತಕ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು.
ಅವರು ಮಂಗಳೂರಿನ ಅಟಲ್ ಸೇವಾ ಕೇಂದ್ರದಲ್ಲಿ ಪತ್ರಿಕಾಗೊಷ್ಠಿ ನಡೆಸಿ ಮಾತನಾಡಿ ಪಾಲಿಕೆ ವಾರ್ಡ್ ಸಮಿತಿ ಪಟ್ಟಿಯಲ್ಲಿ ಬಿಜಪಿಯವರು ಮಾತ್ರ ಇದ್ದರೆ ಎನ್ನುವ ಮಾಜಿ ಶಾಸಕ ಜೆ.ಆರ್.ಲೊಬೋರವರ ಹೇಳಿಕೆ ಅವರಿಗೆ ಶೋಭೆ ತರುವಂತಹದಲ್ಲ, ನಾವು ಬಹಿರಂಗ ಚರ್ಚೆಗೆ ಸಿದ್ಧವಿದ್ದೇವೆ. ಮಂಗಳೂರು ನಗರ ಅಭಿವೃದ್ಧಿಯಾಗುತ್ತಿದೆ. ಬಿಜೆಪಿ ಜನರಿಗೆ ಉತ್ತಮ ಆಡಳಿತ ನೀಡುತ್ತಿದೆ. ಎನ್ನುವ ಕಾರಣಕ್ಕೆ ಅಭಿವೃದ್ಧಿ ಕೆಲಸಗಳಿಗೆ ಕಾಂಗ್ರೆಸ್ ನಾಯಕರು ಅಡ್ಡಗಾಲು ಹಾಕುತ್ತಿದ್ದಾರೆ. ಎಂದು ಹೇಳಿದರು.
ಈ ಸಂದರ್ಭ ಮಂಗಳೂರು ಉತ್ತರ ಮಂಡಲದ ಅಧ್ಯಕ್ಷರಾದ ತಿಲಕ್‌ರಾಜ್ ಮಂಗಳೂರು ದಕ್ಷಿಣ ಮಂಡಲದ ವಿಜಯ್ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ವಕ್ತಾರರಾದ ರಾಧಾಕೃಷ್ಣರವರು ಉಪಸ್ಥಿತರಿದ್ದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು