News Karnataka Kannada
Tuesday, April 23 2024
Cricket
ಮಂಗಳೂರು

ಬೆಳ್ತಂಗಡಿ: ಕ್ಯಾಮೆರಾ ಟ್ರ್ಯಾಪಿಂಗ್ , ಚಿರತೆ ಸೆರೆ

Chirathe
Photo Credit :

ಬೆಳ್ತಂಗಡಿ: ಹುಲಿ ಗಣತಿ ಯೋಜನೆಯ ಅಂಗವಾಗಿ ಅರಣ್ಯ ಇಲಾಖೆಯಿಂದ ನಡೆಯುತ್ತಿರುವ ಕ್ಯಾಮೆರಾ ಟ್ರ್ಯಾಪಿಂಗ್ ನಲ್ಲಿ, ಚಾರ್ಮಾಡಿ ಗ್ರಾಪಂ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ನೆಲ್ಲಿಗುಡ್ಡೆಯ ಪರ್ನಾಲೆ ಎಂಬಲ್ಲಿ ಇಡಲಾಗಿರುವ ಕ್ಯಾಮರಾದಲ್ಲಿ ಚಿರತೆಯು ಒಡಾಡುವ ಚಿತ್ರ ಸೆರೆಯಾಗಿದೆ.

ಮಾ.7ರ ಮುಂಜಾನೆ 4ರ ಸುಮಾರಿಗೆ ಇಲ್ಲಿ ಚಿರತೆ ಓಡಾಟ ನಡೆಸಿದೆ. ಯೋಜನೆಯ ಕಾರ್ಯದಂತೆ 5 ದಿನಗಳಿಗೊಮ್ಮೆ ಚಿತ್ರಗಳನ್ನು ಸಂಗ್ರಹಿಸಲಾಗುತ್ತಿದ್ದು ಆ ಸಮಯ ಚಿರತೆ ಓಡಾಟದ ಚಿತ್ರ ಕಂಡು ಬಂದಿದೆ.

ಕಳೆದ ಎರಡು ವರ್ಷಗಳ ಹಿಂದೆ ಈ ಪರಿಸರದ ಹೈನುಗಾರರ ಕರುವೊಂದನ್ನು ಚಿರತೆ ಹಿಡಿದಿದ್ದು ಅದರ ಕಳೇಬರ ಈ ಸ್ಥಳದ ಆಸುಪಾಸು ಕಂಡು ಬಂದಿದ್ದು,ಸ್ಥಳದಲ್ಲಿ ಬೋನನ್ನು ಇಲಾಖೆ ವತಿಯಿಂದ ಇಡಲಾಗಿತ್ತು.

ಪ್ರದೇಶವು ರಾಷ್ಟ್ರೀಯ ಹೆದ್ದಾರಿ ಸಮೀಪವಿದ್ದ ಹೆದ್ದಾರಿ ರಸ್ತೆಯಲ್ಲಿ ಆಗಾಗ ಚಿರತೆ ಓಡಾಡುವ ಕುರಿತು ವಾಹನ ಸವಾರರು ತಿಳಿಸಿದ್ದರು.ಕ್ಯಾಮೆರಾ ಟ್ರ್ಯಾಪಿಂಗ್ ನಲ್ಲಿ ಚಿರತೆ ಸೆರೆಯಾಗಿರುವುದರಿಂದ ಈಗ ಇದು ಧೃಢಪಟ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು