ಮಂಗಳೂರು: ಕಾರು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಅದೃಷ್ಟವಶಾತ್ ಬೈಕ್ ಸವಾರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಬಂಟ್ವಾಳ ತಾಲೂಕಿನ ಭಂಡಾರಿಬೆಟ್ಟು ನಲ್ಲಿ ಭಾನುವಾರ ನಡೆದಿದೆ.
ಘಟನೆ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ರೋಚಕ ಸನ್ನಿವೇಶ ನೋಡಿ ಜನ ಗಾಬರಿಯಾಗಿದ್ದಾರೆ. ಬೈಕ್ ಸವಾರ ಕೃಷ್ಣಾಮಯ್ಯ ಸೂರ್ಯನಾರಾಯಣ ಮಯ್ಯ ಅವರಿಗೆ ಸಣ್ಣಪುಟ್ಟಗಾಯಗಳಾಗಿವೆ. ಗುದ್ದಿದ ರಭಸಕ್ಕೆ ಬೈಕ್ ಸವಾರ ರಸ್ತೆ ಮೇಲೆ ಬಿದ್ದಿದ್ದಾರೆ. ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.