ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿಗೆ ಆಗಮಿಸಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಪೂರ್ವಹ್ನ 10 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ವಿ. ಸುನೀಲ್ ಕುಮಾರ್, ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ. ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಸಂಜೀವ ಮಠಂದೂರು, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.
ಮುಖ್ಯಮಂತ್ರಿಗಳು ಮಂಗಳೂರು ಮತ್ತು ಉಡುಪಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವರು.