ಮಂಗಳೂರು: ಕಾಲೇಜಿನಲ್ಲಿ ಹಿಜಾಬ್ ವಿವಾದ ವಿಚಾರಣೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರಿಗೆ ವಿವಿಯಿಂದ ನೋಟಿಸ್ ಜಾರಿಯಾಗಿದೆ. ಕಾಲೇಜಿನ ಶಿಸ್ತು ಉಲ್ಲಂಘಿಸಿ ಘನತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ವಿವಿ ಕಾಲೇಜು ಪ್ರಾಂಶುಪಾಲೆ ಡಾ. ಅನುಸೂಯಾ ನೋಟಿಸು ಜಾರಿ ಮಾಡಿದ್ದಾರೆ.
ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಗಡುವು ನೀಡಿದ ಬೆನ್ನಲ್ಲೇ ನೋಟಿಸ್ ನೀಡಿ ಎಚ್ಚರಿಕೆ ನೀಡಿದ್ದಾರೆ. ಬಾಹ್ಯಶಕ್ತಿಗಳ ಜೊತೆಗೂಡಿ ಪತ್ರಿಗೋಷ್ಠಿ ನಡೆಸಿದ್ದೀರಿ ಕಾಲೇಜಿನ ವಿರುದ್ಧವಾಗಿ ಪ್ರಾಂಶುಪಾಲರ ವಿರುದ್ಧ ಕೆಲ ಹೇಳಿಕೆ ನೀಡಿ ಕಾಲೇಜಿನ ಘನತೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ನೋಟೀಸಿನಲ್ಲಿ ಹೇಳಲಾಗಿದೆ.
ಈ ರೀತಿಯ ವರ್ತನೆ ಬಗ್ಗೆ ನಿಮ್ಮ ಮೇಲೆ ಯಾಕೆ ಶಿಸ್ತು ಕ್ರಮ ಕೈಗೊಳ್ಳಬಾರದೆಂದು ಪ್ರಶ್ನಿಸಲಾಗಿದ್ದು ಈ ಬಗ್ಗೆ ಸಮಜಾಯಿಸಿ 3ದಿನದೊಳಗೆ ಉತ್ತರಿಸುವಂತೆ ಸೂಚಿಸಿದ್ದಾರೆ. ಹಿಜಾಬ್ ವಿದ್ಯಾರ್ಥಿನಿ ಗೌಸಿಯಾ ಸೇರಿ ಇತರ ವಿದ್ಯಾರ್ಥಿನಿಯರಿಗೆ ನೋಟಿಸ್ ನೀಡಲಾಗಿದ್ದು ಮೊದಲ ಹಂತವಾಗಿ ನೋಟಿಸ್ ನೀಡಲಾಗಿದೆ. ಈ ಬಳಿಕವೂ ನಿಯಮ ಮೀರಿದರೆ ಕಾಲೇಜಿನಿಂದ ಅಮಾನತು ಮಾಡಲಾಗುವುದೆಂದು ಎಚ್ಚರಿಕೆ ನೀಡಲಾಗಿದೆ.