News Karnataka Kannada
Tuesday, April 23 2024
Cricket
ಮಂಗಳೂರು

ವಿಟ್ಲ: ‘ಪದ್ಮಶ್ರೀ’ ವಿಜೇತ ಮಹಾಲಿಂಗ ನಾಯ್ಕ ಮನೆಗೆ ತಹಶೀಲ್ದಾರ್ ಭೇಟಿ

Vitla
Photo Credit :

ವಿಟ್ಲ: ‘ಪದ್ಮಶ್ರೀ’ ಪುರಸ್ಕಾರಕ್ಕೆ ಆಯ್ಕೆಗೊಂಡ ಕೇಪು ಗ್ರಾಮದ ಅಮೈ ನಿವಾಸಿ ಮಹಾಲಿಂಗ ನಾಯ್ಕ ಅವರ ಮನೆಗೆ ಬಂಟ್ವಾಳ ತಹಶೀಲ್ದಾರ್ ನಿಯೋಗ ಭೇಟಿ ನೀಡಿ, ಸಾಧಕರನ್ನು ಸನ್ಮಾನಿಸಿತು.

ತಹಶೀಲ್ದಾರ್ ರಶ್ಮಿ ಎಸ್. ಆರ್. ಅವರು ತಮ್ಮ ಸಿಬ್ಬಂದಿ ಜತೆ ಭೇಟಿ ನೀಡಿದ್ದು, ಮಹಾಲಿಂಗ ನಾಯ್ಕ ಅವರು ಕೊರೆದ ಸುರಂಗ ಮತ್ತು ತೋಟಗಳನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಮಹಾಲಿಂಗ ನಾಯ್ಕ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.

“ಪದ್ಮಶ್ರೀ ಪ್ರಶಸ್ತಿ ಸಿಕ್ಕಿದ್ದು, ಖುಷಿ ತಂದಿದೆ. ದ.ಕ. ಜಿಲ್ಲಾಡಳಿತ ವತಿಯಿಂದ ಇಂದು ತಮಗೆ ನೀಡಿದ ಗೌರವ ತುಂಬಾನೇ ಸಂತಸ ತಂದಿದೆ” ಎಂದು ಮಹಾಲಿಂಗ ನಾಯ್ಕ ತಿಳಿಸಿದರು.

ಉಪತಹಶೀಲ್ದಾರ್ ದಿವಾಕರ ಮುಗುಳ್ಯ, ನವೀನ್ ಕುಮಾರ್, ಕಂದಾಯ ನಿರೀಕ್ಷಕ ಮಂಜುನಾಥ, ಗ್ರಾಮ ಕರಣಿಕರಾದ ವಿನುತಾ, ಗ್ರಾಮ ಸಹಾಯಕ ಗಣೇಶ, ತಾಲೂಕು ಕಚೇರಿಯ ಸುಂದರ, ಶಿವಪ್ರಸಾದ್, ಮಹಮ್ಮದ್ ಆಸೀಫ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು