ಬೆಳ್ತಂಗಡಿ : ವಿದ್ಯಾರ್ಥಿ ಸಂಘಟನೆಯೊಂದರಲ್ಲಿ ಗುರುತಿಸಿದ್ದಾನೆ ಎಂಬ ನೆಪವನ್ನೊಡ್ಡಿ ಕಾಲೇಜಿನಿಂದ ವಿದ್ಯಾರ್ಥಿಯನ್ನು ಡಿಬಾರ್ ಮಾಡಿದ ಘಟನೆಯು
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಾಣಿ ಪಿಯು ಕಾಲೇಜಿನಲ್ಲಿ ನಡೆದಿದೆ.
ಕಳೆದ 19 ದಿನಗಳಿಂದ ಸಂಸ್ಥೆಯೊಂದಿಗೆ ವಿದ್ಯಾರ್ಥಿ ಕಾಲೇಜಿಗೆ ಸೇರಿಸುವಂತೆ ವಿನಂತಿ ಮಾಡಿದ್ದರೂ, ಮನಿಯದ ಸಂಸ್ಥೆಯು ಕಾಲೇಜಿನಿಂದ ಹೊರಹಾಕಿದೆ. ಹೀಗಾಗಿ ಇಂದು ವಿದ್ಯಾರ್ಥಿ ನ್ಯಾಯಕ್ಕಾಗಿ ಕಾಲೇಜಿನ ಮುಂಭಾಗ ಒಂಟಿ ಪ್ರತಿಭಟನೆ ನಡೆಸುತ್ತಿದ್ದಾನೆ. ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರೆಸಬೇಕು, ಡಿಬಾರ್ ಹಿಂಪಡೆಯಬೇಕೆಂದು ವಿದ್ಯಾರ್ಥಿ ಆಗ್ರಹಿಸಿದ್ದಾನೆ.