News Karnataka Kannada
Tuesday, April 16 2024
Cricket
ಮಂಗಳೂರು

ಸೋಮವಾರ ಸುರಿದ ಮಳೆಗೆ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ ನೀರು

New Project (39)
Photo Credit :
ಬೆಳ್ತಂಗಡಿ : ತಾಲೂಕಿನ ಹೆಚ್ಚಿನ ಪ್ರದೇಶಗಳಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಉತ್ತಮ ಮಳೆಯಾಗಿದೆ. ಕೆಲವು ಕಡೆಗಳಲ್ಲಿ ಭಾರಿ ಮಳೆ ಸುರಿದಿದ್ದು ಹಲವೆಡೆ ತೋಟ ಗದ್ದೆಗಳಿಗೆ ನೀರುನುಗ್ಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ನೀರು ನುಗ್ಗಿದೆ.
ಮುಂಡಾಜೆ,ಕಲ್ಮಂಜ, ಕಡಿರುದ್ಯಾವರ, ಮಲವಂತಿಗೆ,ದಿಡುಪೆ, ತೋಟತ್ತಾಡಿ ಪರಿಸರಗಳಲ್ಲಿ ಭಾರಿ ಮಳೆ ಸುರಿದಿದೆ. ಕಡಿರುದ್ಯಾವರ ಗ್ರಾಮದ ಎರ್ಮಾಲ್ ಫಲ್ಕೆಯ ಬೈಲು ಹಳ್ಳದಲ್ಲಿ ಭಾರಿ ಪ್ರಮಾಣದ ನೀರು ಹರಿದು ಸಮೀಪದ ಕೃಷಿ ತೋಟ ಹಾಗೂ ಗದ್ದೆಗಳಿಗೆ ನೀರು ನುಗ್ಗಿತ್ತು.
ಮುಂಡಾಜೆಯ ಧೂಂಬೆಟ್ಟು,ಕಜೆ ಸೋಮಂತಡ್ಕ ಪರಿಸರದಲ್ಲಿ ಗುಡುಗು ಸಹಿತ ಮಳೆಯ ಜತೆ ಗಾಳಿಯು ಬೀಸಿದ್ದು ಕೆಲವು ತೋಟಗಳಲ್ಲಿ ಅಡಕೆ ಮರಗಳು ಮುರಿದು ಬಿದ್ದಿವೆ. ತೋಟತ್ತಾಡಿ ಪರಿಸರಸಲ್ಲಿಯೂ ಮಳೆ ಸುರಿದಿದ್ದು ತೋಟಗಳಿಗೆ ನೀರು ನುಗ್ಗಿದೆ.
ಮೃತ್ಯುಂಜಯ ಹಾಗೂ ನೇತ್ರಾವತಿ ನದಿಗಳ ನೀರಿನ ಹರಿವು ಹೆಚ್ಚಾಗಿದೆ. ಗುರುವಾಯನಕೆರೆ ಪರಿಸರದಲ್ಲಿ ಭಾರೀ ಮಳೆಗೆ ರಸ್ತೆಯಲ್ಲಿ ಮಳೆನೀರು ಹರಿದು ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಮದ್ದಡ್ಕದಲ್ಲಿ ಚರಂಡಿಗಳ ನೀರು ರಸ್ತೆಗೆ ಉಕ್ಕಿಹರಿದು ರಸ್ತೆ ಬದಿಯಲ್ಲಿರುವ ಅಂಗಡಿಗಳಿಗೆ ನೀರು ನುಗ್ಗಿದೆ.ವ್ಯಾಪಾರಸ್ಥರಿಗೆ ಹಾಗೂ ವಾಹನ ಚಾಲಕರಿಗೆ ತೊಂದರೆಯುಂಟಾಯಿತು. ಸುಮಾರು ಅರ್ಥ ಗಂಟೆಕಾಲ ಈ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು