News Kannada
Saturday, April 01 2023

ಮಂಗಳೂರು

ಹಿರಿಯ ಪತ್ರಕರ್ತ ಡಿ.ಎಂ.ಕುಲಾಲ್ ಅವರಿಗೆ ಶ್ರದ್ಧಾಂಜಲಿ ಸಭೆ

Photo Credit :
ಬಂಟ್ವಾಳ : ಗುರುವಾರ ನಿಧನ ಹೊಂದಿದ ಹಿರಿಯ ಪತ್ರಕರ್ತ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ, ಸಂಘಟಕ ಡಿ.ಎಂ.ಕುಲಾಲ್ ಅವರಿಗೆ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ ಸಭೆ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಶುಕ್ರವಾರ ಸಂಜೆ ನಡೆಯಿತು.
ಬಂಟ್ವಾಳದಲ್ಲಿ ಪತ್ರಕರ್ತರ ಸಂಘದ ಸ್ಥಾಪನೆಗೆ ಕಾರಣಕರ್ತರಾಗಿದ್ದ ಡಿ.ಎಂ.ಕುಲಾಲ್ ಅವರು ಜೀವನದುದ್ದಕ್ಕೂ ಹೋರಾಟ ಹಾಗೂ ಸಂಘಟನೆಯನ್ನು ಮಾಡುವುದರ ಮೂಲಕ ಅಸಂಘಟಿತ ದಮನಿತರಿಗೆ ದನಿಯಾಗಿದ್ದರು ಎಂದು ಈ ಸಂದರ್ಭ ಮಾತನಾಡಿದ ಹಿರಿಯ ಪತ್ರಕರ್ತ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಹೆಬ್ಬಾರ್  ಹೇಳಿದರು.
ಹಿರಿಯ ಪತ್ರಕರ್ತ ರಾಜಾ ಬಂಟ್ವಾಳ ಮಾತನಾಡಿ, ಡಿ.ಎಂ.ಕುಲಾಲ್ ಅವರೊಂದಿಗಿನ ಒಡನಾಟಗಳನ್ನು ಸ್ಮರಿಸಿ, ಸಂಘಟನಾತ್ಮಕವಾಗಿ ಅವರು ಹಲವರಿಗೆ ಮಾರ್ಗದರ್ಶಕರಾಗಿದ್ದರು ಎಂದು ಸ್ಮರಿಸಿಕೊಂಡರು. ಮತ್ತೋರ್ವ ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಮಾತನಾಡಿ, ಡಿ.ಎಂ.ಕುಲಾಲ್ ಅವರ ಬದುಕು ಹಾಗೂ ಹೋರಾಟದ ಹಾದಿಯನ್ನು ಸ್ಮರಿಸಿದರು. ಹಿರಿಯ ಪತ್ರಕರ್ತ ವೆಂಕಟೇಶ ಬಂಟ್ವಾಳ ಮತ್ತು ತಾಲೂಕು ಕಾರ್ಯನಿರತ ಪತ್ರಕರ್ತರ  ಸಂಘದ ಅಧ್ಯಕ್ಷ ಹರೀಶ ಮಾಂಬಾಡಿ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭ ರಂಗಕರ್ಮಿ ಎಚ್.ಕೆ.ನಯನಾಡು, ಪತ್ರಕರ್ತರ ಸಂಘದ ಪದಾಧಿಕಾರಿಗಳಾದ ಮೌನೇಶ ವಿಶ್ವಕರ್ಮ, ರತ್ಮದೇವ ಪುಂಜಾಲಕಟ್ಟೆ, ಯಾದವ ಅಗ್ರಬೈಲು, ಕಿರಣ್ ಸರಪಾಡಿ, ಚಂದ್ರಶೇಖರ ಕಲ್ಮಲೆ, ಇಮ್ತಿಯಾಜ್ ಶಾ ತುಂಬೆ ಉಪಸ್ಥಿತರಿದ್ದರು. ಪತ್ರಕರ್ತ ಸಂದೀಪ್ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
See also  ಜೈನ ಧರ್ಮದ ವಿರುದ್ದ ಅಪಮಾನಿಕಾರಿಯಾಗಿ ಮಾತನಾಡಿದವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು