News Kannada
Wednesday, March 22 2023

ಮಂಗಳೂರು

ದಸರಾ ಹೆಸರಲ್ಲಿ ಜನರ ತೆರಿಗೆ ಹಣವ ಲೂಟಿ – ಸುನೀಲ್‌ ಕುಮಾರ್ ಬಜಾಲ್

Photo Credit :

ಮಂಗಳೂರು : ಮಹಾನಗರ ಪಾಲಿಕೆಯು ದಸರಾ ಹಬ್ಬಕ್ಕೆ ದಾರಿ ದೀಪಾಲಂಕಾರಕ್ಕಾಗಿ 38 ಲಕ್ಷ ಹಣವನ್ನು ಪೋಲು ಮಾಡುತ್ತಿರುವ ಹಿಂದೆ ಬಿಜೆಪಿ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣವು ಅಡಗಿದೆ ಮಾತ್ರವಲ್ಲ ಇದು ಜನತೆಯ ತೆರಿಗೆಯ ಹಣವನ್ನು ದಸರಾ ಹೆಸರಲ್ಲಿ ಲೂಟಿ ಮಾಡಲು ಹೊರಟಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಇಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಸಮಾನ ಮನಸ್ಕ ಸಂಘಟನೆ, ಪಕ್ಷಗಳ ಒಕ್ಕೂಟದ ಆಶ್ರಯದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಮುಂದುವರಿದು ಮಾತನಾಡುತ್ತಾ ಅವರು, ಪಾಲಿಕೆಯು ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದೆ ಎಂಬ ಹಲವು ನೆಪಗಳ ಮುಂದಿಟ್ಟುಕೊಂಡು ಅಭಿವೃದ್ಧಿ ಕೆಲಸವನ್ನು ಕುಂಠಿತಗೊಳಿಸಿದೆ. ಈ ಹಿಂದೆ ಅಭಿವೃದ್ಧಿ ಕೆಲಸಗಳಿಗಾಗಿ ಎಡಿಬಿಯಿಂದ ಎರಡು ಹಂತದಲ್ಲಿ ತಂದಿರುವ ಕೋಟ್ಯಾಂತರ ರೂಪಾಯಿ ಸಾಲವನ್ನು ಸಂದಾಯ ಮಾಡಲು ಬಾಕಿ ಇರಿಸಿದೆ. ಕಳೆದ ವರುಷದ ಮೂರು ಕೋಟಿಯಷ್ಟು ಮೆಸ್ಕಾಂನ ವಿದ್ಯುತ್ ಬಿಲ್ ಕೂಡಾ ಪಾವತಿಸಿಲ್ಲ. ಇಷ್ಟೊಂದು ಸಾಲ ಇರಿಸಿಕೊಂಡು ದಸರಾ ಹಬ್ಬದ ಹೆಸರಲ್ಲಿ ದೀಪಾಲಂಕಾರಕ್ಕಾಗಿ ಹಣ ವ್ಯಯಿಸುವುದು ಎಷ್ಟು ಸರಿ..? ಜನರಿಂದ ತೆರಿಗೆ ರೂಪದಲ್ಲಿ ಸಂಗ್ರಹಿಸಿದ ಹಣವನ್ನು ಈ ರೀತಿ‌ ಖರ್ಚು ಮಾಡಲು ಸರಕಾರಗಳ ನಿಯಮಗಳಲ್ಲಿ ಯಾವುದೇ ಅವಕಾಶಗಳಿಲ್ಲ.ಪಾಲಿಕೆಯ ಬಿಜೆಪಿ‌ ಆಡಳಿತ ಈ ಕೂಡಲೇ ಮಂಜೂರು‌ ಮಾಡಿರುವ 38 ಲಕ್ಷ ಹಣವನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿದರು.

ಪ್ರತಿಭನೆಯನ್ನು ಉದ್ದೇಶಿಸಿ ಸಿಪಿಐಎಂ ಪಕ್ಷದ ಮುಖಂಡರೂ, ಮಾಜಿ ಕಾರ್ಪೊರೇಟರ್ ಗಳಾದ ದಯಾನಂದ ಶೆಟ್ಟಿ,ಜಯಂತಿ ಶೆಟ್ಟಿ,ಜೆಡಿಎಸ್ ನ ಸುಮತಿ ಎಸ್ ಹೆಗ್ಡೆ, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ‌ಸಂತೋಷ್ ಬಜಾಲ್ ರವರು ಮಾತನಾಡಿ,ಜನತೆಯ ತೆರಿಗೆಯ ಹಣವನ್ನು ಲಪಟಾಯಿಸಲು ಹುನ್ನಾರ ನಡೆಸುವ ಬಿಜೆಪಿ ಆಡಳಿತಕ್ಕೆ ಛೀಮಾರಿ ಹಾಕಿದರು.

ಈ ವೇಳೆ ಡಿವೈಎಫ್ಐ ಮಂಗಳೂರು ನಗರ ಮುಖಂಡರಾದ ನವೀನ್ ಕೊಂಚಾಡಿ,ಜಗದೀಶ್ ಬಜಾಲ್,ಪ್ರಮೀಳಾ ಶಕ್ತಿನಗರ,ಮನೋಜ್ ಉರ್ವಾಸ್ಟೋರ್ , ಸಿಪಿಐ ಪಕ್ಷದ ಮುಖಂಡರಾದ ವಿ.ಕುಕ್ಯಾನ್, ಕರುಣಾಕರ್,ದಲಿತ ಹಕ್ಕುಗಳ ಸಮಿತಿಯ ನಾಯಕರಾದ ತಿಮ್ಮಯ್ಯ ಕೊಂಚಾಡಿ, ಕೃಷ್ಣ ತಣ್ಣೀರುಬಾವಿ,ರಘುವೀರ್, CPIM ಮುಖಂಡರಾದ ಬಾಬು‌ ದೇವಾಡಿಗ,ಅಶೋಕ್ ಸಾಲ್ಯಾನ್,ಉದಯಚಂದ್ರ ರೈ,ನಾಗೇಶ್ ಕೋಟ್ಯಾನ್, ಸಾಮಾಜಿಕ ಚಿಂತಕರಾದ ಪ್ರಮಿಳಾ ದೇವಾಡಿಗ,, ಜೆಡಿಎಸ್ ಮುಖಂಡರಾದ, ಹರ್ಷಿತ, ಅಲ್ತಾಫ್ ತುಂಬೆ, ಶಾರದಾ,ಶಿವಕುಮಾರ್ ಮುಂತಾದವರು ಉಪಸ್ಥಿತರಿದ್ದರು.

See also  ಗಾಂಧಿ ಜಯಂತಿಯ ಪ್ರಯುಕ್ತ 116ನೇ ರಕ್ತದಾನ ಶಿಬಿರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು