News Kannada
Friday, March 24 2023

ಮಂಗಳೂರು

ನಿರಂತರ ಓದಿನೊಂದಿಗೆ ಉನ್ನತ ಅಧಿಕಾರಿಗಳಾಗುವತ್ತ ಗಮನ ಹರಿಸಿ; ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ

Photo Credit :

ಮಂಗಳೂರು : ವಿದ್ಯಾರ್ಥಿಗಳು ಜ್ಞಾನ ಹೊಂದುವ ಜತೆಗೆ ಉನ್ನತ ಅಧಿಕಾರಿಗಳಾಗಿ ದೇಶಕ್ಕೆ ಕೀರ್ತಿ ತರುವ ಕೆಲಸದತ್ತ ಗಮನ ಹರಿಸಬೇಕು ಎಂದು ಪದ್ಮಶ್ರೀ ಪುರಸ್ಕೃತ ಅಕ್ಷರಸಂತ ಹರೇಕಳ ಹಾಜಬ್ಬ ಹೇಳಿದರು. ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್ ಆಫ್ ಮಂಗಳಗಂಗೋತ್ರಿ (ಮಾಮ್) ಸಂಘಟನೆ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ `ಮಾಮ್ ಇನ್‌ಸ್ಪೈರ್ ಅವಾರ್ಡ್’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ಹರೇಕಳದ ಮೂಲೆಯಲ್ಲಿದ್ದ ನನ್ನನ್ನು ಮಾಧ್ಯಮ ಗುರುತಿಸಿ ಇದುವರೆಗೆ ಬೆಳೆಸಿದೆ. ಸಾಮಾನ್ಯ ಮನುಷ್ಯನಾದ ನನಗೆ ಪದ್ಮಶ್ರೀಯಂತಹ ಪ್ರಶಸ್ತಿ ದೊರೆಯುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವವಾದುದು. ಮಾಧ್ಯಮದ ಎಲ್ಲರಿಗೂ ನನ್ನ ಕೃತಜ್ಞತೆಗಳು ಎಂದರು. ಮಾಧ್ಯಮ ಶಕ್ತಿ ದೊಡ್ಡದು, ನನಗೆ ಇಂದು ಸಿಗುತ್ತಿರುವ ಮರ್ಯಾದೆ ಯಾವುದೇ ರೀತಿಯ ಐಶ್ವರ್ಯಕ್ಕಿಂತಲೂ ಮಿಗಿಲಾಗಿದ್ದು, ಹಳ್ಳಿಯ ಸಾಮಾನ್ಯನೊಬ್ಬನನ್ನು ದಿಲ್ಲಿಗೆ ತಲುಪಿಸಿದ್ದು ಮಾಧ್ಯಮ ಶಕ್ತಿ ಎಂದರು.

ಮುಖ್ಯ ಅತಿಥಿಯಾಗಿದ್ದ ಹೊಸ ದಿಗಂತ ದಿನಪತ್ರಿಕೆಯ ಹಿರಿಯ ವರದಿಗಾರ ಗುರುವಪ್ಪ ಎನ್.ಟಿ.ಬಾಳೇಪುಣಿ ಮಾತನಾಡಿ, ಸರಳತೆ, ಮುಗ್ದತೆ, ಪ್ರಾಂಜಲ ಮನಸ್ಸು ಹಾಜಬ್ಬ ಅವರ ಆಭರಣಗಳಾಗಿವೆ. ಅವರು ತಮ್ಮ ವೈಯಕ್ತಿಕ ಬದುಕಿಗಿಂತ ಹರೇಕಳದ ಶಾಲೆಗೆ ಮಹತ್ವ ನೀಡಿ, ಶಾಲೆಯೇ ಸರ್ವಸ್ವ ಎನ್ನುವ ರೀತಿಯಲ್ಲಿ ಜೀವಿಸುತ್ತಿದ್ದಾರೆ. ಹಾಜಬ್ಬ ಅವರಂತಹ ಹತ್ತಾರು ಮಂದಿ ಸಮಾಜದಲ್ಲಿ ಇದ್ದಾರೆ. ಮಾಧ್ಯಮಗಳು ಅಂತವರನ್ನು ಬೆಳಕಿಗೆ ತಂದು ಪ್ರೋತ್ಸಾಹಿಸಬೇಕಿದೆ ಎಂದರು.

ಮಾಮ್ ಗೌರವಾಧ್ಯಕ್ಷ ವೇಣು ಶರ್ಮ ಮಾತನಾಡಿ, ಪತ್ರಿಕೋದ್ಯಮ ಶಿಕ್ಷಣ ಹೊಸ ಚಿಂತನೆ, ಬದಲಾವಣೆಗಳೊಂದಿಗೆ ಹೊಸ ರೂಪವನ್ನು ಪಡೆಯಬೇಕೆಂದು ಆಶಯ ವ್ಯಕ್ತಪಡಿಸಿದರು. ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗದಲ್ಲಿ ಮೂಡಬಿದಿರೆ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ಶ್ರೀರಕ್ಷಾ ರಾವ್ ಪುನರೂರು ಪ್ರಥಮ ಸ್ಥಾನ, ಪದವಿ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ದುರ್ಗಾ ಪ್ರಸನ್ನ ಪ್ರಥಮ ಮತ್ತು ದ್ವಿತೀಯ ಸ್ಥಾನವನ್ನು ಎಸ್‌ಡಿಎಂ ಕಾಲೇಜಿನ ಪ್ರಜ್ಞಾ ಓಡಿಲ್ನಾಳ ಪಡೆದುಕೊಂಡಿದ್ದು, ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮಾಮ್ ಅಧ್ಯಕ್ಷ ಸುರೇಶ್ ಪುದುವೆಟ್ಟು ಅಧ್ಯಕ್ಷತೆ ವಹಿಸಿದ್ದರು. `ಮಾಮ್ ಇನ್‌ಸ್ಪೈರ್ ಅವಾರ್ಡ್’ ಪ್ರಶಸ್ತಿ ಸಮಿತಿ ಸಂಚಾಲಕ ಶರತ್ ಹೆಗ್ಡೆ ಕಡ್ತಲ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಮಾಮ್ ಪ್ರಧಾನ ಕಾರ್ಯದರ್ಶಿ ಸುರೇಶ್ ಡಿ. ಪಳ್ಳಿ ಪ್ರಶಸ್ತಿ ಪುರಸ್ಕೃತರ ವಿವರ ನೀಡಿದರು. ಉಪಾಧ್ಯಕ್ಷ ವೇಣುವಿನೋದ್ ಕೆ.ಎಸ್. ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಕೃಷ್ಣಮೋಹನ್ ತಲೆಂಗಳ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಕೃಷ್ಣ ಕಿಶೋರ್, ಹರೀಶ್ ಮೋಟುಕಾನ ಸಹಕರಿಸಿದರು.

 

See also  ವೇಣೂರು: ಯುಗಲ ಮುನಿಗಳ ಮಂಗಳ ಪ್ರವಚನ ಕಾರ್ಯಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು