News Kannada
Thursday, March 23 2023

ಮಂಗಳೂರು

ಚಾರ್ಮಾಡಿ : ಕಾಡಾನೆಗಳ ದಾಳಿ 50ಅಡಕೆ ಮರ ಧ್ವಂಸ

Photo Credit :

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಮಠದ ಮಜಲು ಅನಂತ್ ರಾವ್ ಅವರ ತೋಟಕ್ಕೆ ಸೋಮವಾರ ತಡರಾತ್ರಿ ದಾಳಿ ನಡೆಸಿದ ಕಾಡಾನೆ 80 ಅಡಕೆ ಮರ, 5 ತೆಂಗಿನ ಮರ ಹಾಗೂ ಅನೇಕ ಬಾಳೆ ಗಿಡಗಳನ್ನು ನಾಶ ಮಾಡಿವೆ.

ಶನಿವಾರ ರಾತ್ರಿ ಕೂಡ ಇವರ ತೋಟಕ್ಕೆ ದಾಳಿ ನಡೆಸಿದ್ದ ಕಾಡಾನೆಗಳ 50ಅಡಕೆ ಮರ, ಎರಡು ತೆಂಗು ಹಾಗೂ ಬಾಳೆಗಿಡಗಳನ್ನು ಧ್ವಂಸ ಮಾಡಿತ್ತು.ಇದೀಗ ಮತ್ತೆ ಎರಡು ದಿನಗಳ ಬಳಿಕ ದಾಳಿ ಮುಂದುವರೆದಿದೆ. ಸುಮಾರು ಮೂರು ತಿಂಗಳ ಹಿಂದೆ ಇವರ ತೋಟಕ್ಕೆ ದಾಳಿ ನಡೆಸಿದ್ದ ಗಜಪಡೆ ಅಪಾರ ಕೃಷಿ ನಾಶಕ್ಕೆ ಕಾರಣವಾಗಿತ್ತು.

ಇಲ್ಲಿ ಮಂಗಳವಾರ ಹಾನಿ ಪ್ರಮಾಣ ಅಂದಾಜಿಸುವಾಗ ಮೂರರಿಂದ ಐದು ಕಾಡಾನೆಗಳು ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ.ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದ್ದು, ಕಾಡಾನೆಗಳ ಹಿಂಡು ದಾಳಿ ನಡೆಸಿರುವ ಸಂಶಯ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಸುತ್ತಮುತ್ತಲ ಪ್ರದೇಶದಲ್ಲಿ ಎರಡು ತಿಂಗಳ ಹಿಂದೆ ಒಂಟಿ ಸಲಗ ಹಾಗೂ ಕಾಡಾನೆಗಳ ಹಿಂಡು ಕಂಡು ಬಂದಿತ್ತು.

See also  ಬಂಟ್ವಾಳ :ಬ್ರಹ್ಮಕಲಶದ ಹೊಸ್ತಿಲಲ್ಲಿರುವ ಎಲ್ಲಾ ಕ್ಷೇತ್ರಗಳ ಸಂಪರ್ಕ ರಸ್ತೆಗಳನ್ನು ಆದ್ಯತೆಯ ನೆಲೆಯಲ್ಲಿ ಅಭಿವೃದ್ಧಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು