News Kannada
Monday, March 27 2023

ಮಂಗಳೂರು

ಪುನೀತ್ ರಾಜ್‌ಕುಮಾರ್ ಯುವರತ್ನ ಪ್ರಶಸ್ತಿ ಪ್ರೊ ಕಬಡ್ಡಿ ಉತ್ಸವ

Photo Credit :

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಇದರ 37ನೇ ವರ್ಷದ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆಯುವ ಪುನೀತ್ ರಾಜ್‌ಕುಮಾರ್ ಯುವರತ್ನ ಪ್ರಶಸ್ತಿ ಪ್ರೊ ಕಬಡ್ಡಿ ಉತ್ಸವಕ್ಕೆ ಚಾಲನೆ ಹಾಗೂ ನೂತನವಾಗಿ ನಿರ್ಮಾಣಗೊಂಡ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆ ಶನಿವಾರ  ಜರಗಿತು.

ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅವರು ನೂತನ ಕ್ರೀಡಾಂಗಣವನ್ನು ಉದ್ಘಾಟಿಸಿ ಮಾತನಾಡಿ, ಒಳಾಂಗಣ ಕ್ರೀಡಾಂಗಣವನ್ನು ಸುಸಜ್ಜಿತಗೊಳಿಸುವುದರೊಂದಿಗೆ ಶಾಶ್ವತ ಗ್ಯಾಲರಿ ಸಹಿತ ಇತರ ವ್ಯವಸ್ಥೆ ಕಲ್ಪಿಸುವ  ನಿಟ್ಟಿನಲ್ಲಿ ರಾಜ್ಯದ ಕ್ರೀಡಾ ಸಚಿವರೊಂದಿಗೆ ಮಾತುಕತೆ ನಡೆಸಿ 10 ಲಕ್ಷ ರೂ. ಅನುದಾನ ಒದಗಿಸಲಾಗುವುದು ಎಂದು ಹೇಳಿದರು.
ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನ ಆಡಳಿತದಾರ ಶಿವಪ್ರಸಾದ್ ಅಜಿಲ ಅವರು ಪ್ರೊ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿದರು. ಕ್ಲಬ್ ಸ್ಥಾಪಕಾಧ್ಯಕ್ಷ, ಜಿ.ಪಂ. ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಮಾತನಾಡಿ, ದೇಶೀಯ ಮಣ್ಣಿನ ಕ್ರೀಡೆ ಕಬಡ್ಡಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕ್ಲಬ್ ವತಿಯಿಂದ ದಾನಿಗಳ ಸಹಕಾರದಿಂದ ೩೭ ವರ್ಷದಿಂದ ನಿರಂತರವಾಗಿ ಕಬಡ್ಡಿ ಪಂದ್ಯಾಟ ನಡೆಸುತ್ತಾ ಬಂದಿದ್ದೇವೆ ಎಂದು ಹೇಳಿದರು.

ರಾಬರ್ಟ್ ಸಂಸ್ಥೆಯ ಮಾನವ ಸಂಪನ್ಮೂಲ ಅಧಿಕಾರಿ ಜಯಂತ್ ಪೂಜಾರಿ ಪಡ್ಡಾಯೂರು ಅವರು ಪ್ರೌಢ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟ ಉದ್ಘಾಟಿಸಿ ಶುಭಹಾರೈಸಿದರು.ಶ್ರೀ ಕ್ಷೇ.ಧ.ಗ್ರಾ.ಯೋ.ದ.ಕ.ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ  ಕೋಶಾಧಿಕಾರಿ ಪದ್ಮರಾಜ್.ಆರ್.,  ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ ,ಉಪಾಧ್ಯಕ್ಷ ಲಕ್ಷ್ಮೀ ನಾರಾಯಣ ಹೆಗ್ಡೆ,ಪಿಡಿಒ ಯಮುನಪ್ಪ ಕೊರವರ, ಮಡಂತ್ಯಾರ್ ಗ್ರಾ.ಪಂ.ಅಧ್ಯಕ್ಷೆ ಶಶಿಪ್ರಭಾ, ತು.ರ.ವೇ.ಬಂಟ್ವಾಳ ಘಟಕದ ಅಧ್ಯಕ್ಷ ರಮೇಶ್ ಶೆಟ್ಟಿ ಮಜಲೋಡಿ, ಪಿಲಾತಬೆಟ್ಟು ಗ್ರಾ.ಪಂ.ಮಾಜಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ , ಬೆಳ್ತಂಗಡಿ ಕ್ಷೇತ್ರ ಪರಿವೀಕ್ಷಣಾಽಕಾರಿ ಕೆ. ಭುವನೇಶ್ , ಗ್ರಾ.ಪಂ. ಸದಸ್ಯರಾದ ಕಾಂತಪ್ಪ, ದಯಾನಂದ ಎರ್ಮೆನಾಡ್,ಯೋಗೇಂದ್ರ ,ಶಾರದಾ, ಉಪನ್ಯಾಸಕ ರಂಜಿತ್ ಎಚ್.ಡಿ., ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಗೌರವಾಧ್ಯಕ್ಷ ಅಬ್ದುಲ್ಲ ಪಿ., ಪದಾದಿಕಾರಿಗಳಾದ ಜಯರಾಜ್ ಅತ್ತಾಜೆ , ಅಬ್ದುಲ್ ಹಮೀದ್ ಮಲ್ಪೆ, ಫ್ರಾನ್ಸಿಸ್ ವಿ.ವಿ. ಮತ್ತಿತರರು ಉಪಸ್ಥಿತರಿದ್ದರು.

ಪ್ರಭಾಕರ ಪಿ.ಎಂ. ಅವರು ಅವರು ಸ್ವಾಗತಿಸಿದರು. ,ರಾಜೇಶ್ ಪಿ.ಪುಂಜಾಲಕಟ್ಟೆ ಅವರು ವಂದಿಸಿದರು. ದೇವದಾಸ್ ಕಜೆಕಾರು ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ಕ್ರೀಡಾ ಜ್ಯೋತಿ ಮೆರವಣಿಗೆ: ಉದ್ಘಾಟನೆಗೆ ಮುನ್ನ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಬೆರ್ಕಳ ಮತ್ತು ನಯನಾಡು ಶ್ರೀ ರಾಮ ಭಜನ ಮಂದಿರದಿಂದ ಕ್ರೀಡಾ ಜ್ಯೋತಿಯ ಆಕರ್ಷಕ ಮೆರವಣಿಗೆ ನಡೆಯಿತು.

See also  ಮೊಬೈಲ್ ಕದ್ದ ಆರೋಪ: ವ್ಯಕ್ತಿಯನ್ನು ಉಲ್ಟಾ ನೇತು ಹಾಕಿ ಹಲ್ಲೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು