News Kannada
Saturday, April 01 2023

ಮಂಗಳೂರು

ಬಂಟ್ವಾಳ : ಕೋವಿಡ್ ನಿಂದ ಮೃತಪಟ್ಟ ಮಂದಿ ಗೆ ಪರಿಹಾರ ಮೊತ್ತದ ಚೆಕ್ ವಿತರಣೆ

Inauguration of administrative office of Federation of Bunts Associations at Mulki on April 5
Photo Credit :
ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೋವಿಡ್ ನಿಂದ ಮೃತಪಟ್ಟ ಒಟ್ಟು 216 ಮಂದಿ ಆರ್ಜಿ ಸಲ್ಲಿಸಿದ್ದು, 192 ಅರ್ಜಿ ಗಳು ಸಿಂಧುವಾಗಿದ್ದು ಈಗಾಗಲೇ ತಾಲೂಕಿನಲ್ಲಿ 63 ಮಂದಿ ಗೆ ಮೊದಲ ಕಂತಿನ ಪರಿಹಾರ ಮೊತ್ತ ಬಿಡುಗಡೆ ಯಾಗಿದೆ, ಇದರಲ್ಲಿ ಬಂಟ್ವಾಳ ಕ್ಷೇತ್ರದ 43 ಮಂದಿ ಗೆ ಪರಿಹಾರ ಮೊತ್ತದ ಚೆಕ್ ವಿತರಿಸಲಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.
ಅವರು ಬಿಸಿರೋಡಿನ ಶಾಸಕ ಕಚೇರಿ ಯಲ್ಲಿ ಕೋವಿಡ್ ಮೃತರಿಗೆ ಸರಕಾರದಿಂದ ನೀಡಲ್ಪಟ್ಟ ತಲಾ ಒಂದು ಲಕ್ಷ ರೂಗಳ ಪರಿಹಾರ ಮೊತ್ತದ ಚೆಕ್ ವಿತರಿಸಿ ಮಾತನಾಡಿದರು.
ಮೃತ ಬಿ.ಪಿ.ಎಲ್.ಕುಟುಂಬದ ಸದಸ್ಯ ರಿಗೆ ತಲಾ 50 ಸಾವಿರ ರೂ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ, ಬಂಟ್ವಾಳ ದಲ್ಲಿ 11  ಮಂದಿ ಹಲವು ಕಾರಣಗಳಿಂದ ಪರಿಹಾರ ಮೊತ್ತ ಬೇಡ ಎಂದು ತಿಳಿಸಿದ್ದಾರೆ ಎಂದು ಅವರು ಹೇಳಿದರು.
ಈಗಾಗಲೇ ಮೊದಲ ಕಂತಿನ ಪರಿಹಾರದ ಮೊತ್ತ ವನ್ನು ನೀಡಲಾಗಿದ್ದು , ಶೀಘ್ರವಾಗಿ ಕೋವಿಡ್ ನಿಂದ ಮೃತಪಟ್ಟ ಪ್ರತಿಯೊಬ್ಬ ರಿಗೂ ಸರಕಾರದ ಪರಿಹಾರದ ಮೊತ್ತವನ್ನು ನೀಡಲಾಗುತ್ತದೆ. ಕೋವಿಡ್ ಸಂದರ್ಭದಲ್ಲಿ ಸರಕಾರ ಹಸಿವಿಗಾಗಿ ಉಚಿತ ಅಕ್ಕಿ, ಪ್ರತಿಯೊಬ್ಬರಿಗೂ ಉಚಿತ ವ್ಯಾಕ್ಸಿನೇಷನ್‌ ಅನ್ನು ನೀಡಿದೆ ಎಂದು ಅವರು ಹೇಳಿದರು.
ರೂಪಾಂತರಿ ವೈರಸ್ ಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ವಹಿಸಿಕೊಂಡು ಭಯಪಡದೆ ದೈನಂದಿನ ಜೀವನದ ಕೆಲಸವನ್ನು ಮಾಡಬೇಕು ಎಂದರು.
ಜಿ.ಪಂ.ಮಾಜಿ ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ, ಉಳಿ ಗ್ರಾ.ಪಂ. ಅಧ್ಯಕ್ಷ ಸುರೇಶ್ ಮೈರ, ವೀರಕಂಭ ಗ್ರಾ.ಪಂ.ಅದ್ಯಕ್ಷ ದಿನೇಶ್, ಬರಿಮಾರು ಗ್ರಾ.ಪಂ.ಅಧ್ಯಕ್ಷ ಶಶಿಕಲಾ, ಉಪಾಧ್ಯಕ್ಷ ಸದಾಶಿವ ಬರಿಮಾರು, ಅಮ್ಮುಂಜೆ ಗ್ರಾ.ಪಂ.ಅಧ್ಯಕ್ಷ ವಾಮನ ಆಚಾರ್ಯ, ರಾಯಿ ಗ್ರಾ.ಪಂ.ಉಪಾಧ್ಯಕ್ಷ ರಶ್ಮಿತ್ ಕೈತ್ರೋಡಿ, ಮಂಚಿ ಗ್ರಾ.ಪಂ.ಉಪಾಧ್ಯಕ್ಷ ಮೋಹನ್ ದಾಸ ಶೆಟ್ಟಿ, ನರಿಕೊಂಬು ಗ್ರಾ.ಪಂ.ಉಪಾಧ್ಯಕ್ಷ ಪ್ರಕಾಶ್ ಮಡಿಮೊಗೆರು, ಪುರಸಭಾ ಸದಸ್ಯೆ ಮೀನಾಕ್ಷಿ, ಉಪ ತಹಶೀಲ್ದಾರ್ ನರೇಂದ್ರ ನಾಥ್ ಭಟ್  ಪಾಣೆಮಂಗಳೂರು ಕಂದಾಯ ನಿರೀಕ್ಷಕ ಧರ್ಮ ಸಾಮ್ರಾಜ್ಯ, ವಿಟ್ಲ ಕಂದಾಯ ನಿರೀಕ್ಷಕ ಮಂಜುನಾಥ್ ಕೆ.ಎಚ್, ಬಂಟ್ವಾಳ ಕಂದಾಯ ನಿರೀಕ್ಷಕ ಕುಮಾರ್ ಟಿ.ಸಿ, ವಿವಿಧ ಗ್ರಾ.ಪಂ.ಸದಸ್ಯರು, ಗ್ರಾಮ ಕರಣೀಕರು ಉಪಸ್ಥಿತರಿದ್ದರು.
ತಾಲೂಕಿನಲ್ಲಿ ಕೋವಿಡ್ ಮಹಾಮಾರಿಯಿಂದ ಮೃತಪಟ್ಟ ವ್ಯಕ್ತಿಗಳಿಗೆ ಸರಕಾರದ ಪರಿಹಾರವನ್ನು ನೀಡಲಾಯಿತು ಉಳಿದಿರುವ ಪರಿಹಾರದ ಚೆಕ್ ನ್ನು  ಶೀಘ್ರದಲ್ಲೇ ವಿತರಿಸಲಾಗುತ್ತದೆ.
See also  ಸಾಧನೆಯ ಗುರುತು ಮೂಡಿಸುವಲ್ಲಿ ಸಾಹಿತ್ಯವೂ ಒಂದು ಮಾರ್ಗ : ಡಾ.ಮಾಧವ ಭಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು