News Kannada
Sunday, April 02 2023

ಮಂಗಳೂರು

ಕೈಕಂಬದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ವಿಧಾನ ಸಭಾ ಕ್ಷೇತ್ರದ ಕಚೇರಿ ಉದ್ಘಾಟನೆ

Photo Credit : News Kannada

ಬಂಟ್ವಾಳ : ಮಾತು ಮಾತಿಗೆ ನಮ್ಮದು ಡಬ್ಬಲ್ ಇಂಜಿನ್ ‌ಸರಕಾರ ಎಂದು ಭಾಷಣ ಬಿಗಿಯುವ ಸಂಸದ ನಳಿನ್ ಕುಮಾರ್ ಕಟೀಲು ಅವರ ಡಬ್ಬಲ್ ಇಂಜಿನ್ ಸರಕಾರ ಯಾವುದೇ ಇಂಜಿನ್ ಇಲ್ಲದೆ ನಿಂತಿದೆ ಎಂದು ರಾಜ್ಯ ಅಧ್ಯಕ್ಷ ಅಬ್ದುಲ್ ಮಜೀದ್ ಲೇವಡಿ ಮಾಡಿದ್ದಾರೆ.

ಅವರು ಬಿ.ಸಿ.ರೋಡಿನ ಕೈಕಂಬದಲ್ಲಿ ಇಂದು ಉದ್ಘಾಟನೆಗೊಂಡ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ವಿಧಾನ ಸಭಾ ಕ್ಷೇತ್ರದ ಕಚೇರಿಯನ್ನು ಉದ್ಘಾಟಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಾವಿರಾರು ಕೋಟಿ ರೂ ಹೆದ್ದಾರಿಯ ನಿರ್ವಹಣೆಗೆ ಎಂದು ಪ್ರತಿ ವರ್ಷ ಅನುದಾನ ಮಂಜೂರಾಗಿದ್ದರೂ ಹೆದ್ದಾರಿ ನಿರ್ವಹಣೆಯಾಗದೆ ಜನರ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಜಿಲ್ಲೆಯಲ್ಲಿನ ಪ್ರತಿ ಸರ್ವೀಸ್ ರೋಡ್ ಗಳ ಸಮಸ್ಯೆ ಇನ್ನೂ ಸರಿಯಾಗಿಲ್ಲ, ಜಿಲ್ಲೆಯಲ್ಲಿ ಡ್ರಗ್ ಮಾಫಿಯಾ ಬಗ್ಗುಬಡಿಯಲು ಪೋಲೀಸ್ ಇಲಾಖೆಯಿಂದ ಮಾಡಲು ಸಾಧ್ಯವಾಗಿಲ್ಲ, ಅಕ್ರಮ ಮರಳು ಮಾಫಿಯ ನಿಯಂತ್ರಣ ಮಾಡಲು ಸಾಧ್ಯವಾಗಿಲ್ಲದೆ ಇರುವಾಗ ನಳಿನ್ ಕುಮಾರ್ ಕಟೀಲು ಅವರು ಬೇರೆ ರಾಜ್ಯದ ಬಗ್ಗೆ ಮಾತನಾಡುತ್ತಾರೆ ಆದರೆ ಅವರ ಜಿಲ್ಲೆಯಲ್ಲಿ ರುವ ಸಮಸ್ಯೆಗಳನ್ನು ಮೊದಲು ಪರಿಹರಿಸಲಿ ಎಂದು ಅವರು ಹೇಳಿದರು.

ಇಲ್ಲಿನ ಶಾಸಕರ ಬಿಸಿರೋಡು ಸೌಂದರ್ಯದ ಘೋಷಣೆ ಕೇವಲ ಘೋಷಣೆ ಯಾಗಿ ಬಿಟ್ಟಿದೆ, ಮಾಜಿ ಸಚಿವರ ಸಮಯದಿಂದಲೂ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮಾಡಲು ಸಾಧ್ಯವಾಗಿಲ್ಲ ಎಂದು ಆರೋಪ ಮಾಡಿದ ಅವರು ಎಲ್ಲಾ ಸಮಸ್ಯೆಗಳನ್ನು ಕಾಲಮಿತಿಯೊಳಗೆ ಪರಿಹಾರ ಮಾಡದಿದ್ದರೆ ಎಸ್.ಡಿ.ಪಿ.ಐ ಸಂಘಟನೆ ಸಮಸ್ಯೆ ಪರಿಹಾರಕ್ಕಾಗಿ ಹೋರಾಟದ ಹಾದಿ ಹಿಡಿಯುತ್ತೇವೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಬೆಂಜನಪದವು ಕ್ರೀಡಾಂಗಣ ಮಂಜೂರಾದರೂ ಕ್ರೀಡಾಂಗಣದ ಕಾಮಗಾರಿ ಯಾವುದೇ ನಡೆದಿಲ್ಲ ಎಂದವರು ಆರೋಪಿಸಿದರು.

ಹಿಜಾಬ್ ಬಗ್ಗೆ ನಿಮ್ಮ ನಿಲುವು ಏನು ಎಂದು ಪತ್ರಕರ್ತರೋವರ ಪ್ರಶ್ನೆಗೆ ಉತ್ತರಿಸಿದ ರಾಜ್ಯ ದ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್ ಹಿಜಾಬ್ ಧರಿಸುವುದು ವ್ಯಕ್ತಿ ಸ್ವಾತಂತ್ರ್ಯ. ಯಾವುದೇ ವ್ಯಕ್ತಿಯ ಧಾರ್ಮಿಕ ವಿಚಾರಕ್ಕೆ ಧಕ್ಕೆಯಾದಾಗ ಮಾನವ ಹಕ್ಕಿನ ಪರ ನಿಲ್ಲುವುದು ನೈತಿಕ ಬೆಂಬಲ ನೀಡುವುದು ಪಕ್ಷದ ಜವಬ್ದಾರಿ ಯಾಗಿದೆ. ಅಭಿವೃದ್ಧಿ ವಿಚಾರವನ್ನು ಮುಂದಿಟ್ಟು ಕೊಂಡು ರಾಜಕಾರಣ ಮಾಡುವುದು ಬಿಟ್ಟು ಇಂತಹ ವಿಚಾರಗಳ ಮೂಲಕ ಅಶಾಂತಿ ಸೃಷ್ಟಿ ಮಾಡಬೇಡಿ ಎಂದು ಹೇಳಿದರು.

ರಾಷ್ಟ್ರೀಯ ಕಾರ್ಯದರ್ಶಿ ಇಲಿಯಾಸ್ ತುಂಬೆ, ಜಿಲ್ಲಾ ಅಧ್ಯಕ್ಷ ಅಬುಬಕ್ಕರ್ ಕುಳಾಯಿ ಮತ್ತಿತರರು ಉಪಸ್ಥಿತರಿದ್ದರು.

See also  ಜಗತ್ತಿಗೆ ಒಳಿತು ಬಯಸುವ ಹಿಂದೂ ಸಮಾಜ ಒಟ್ಟಾದರೆ ರಾಮರಾಜ್ಯ ನಿರ್ಮಾಣ ಸಾಧ್ಯ: ಡಾ.ಕೆ.ಪ್ರಭಾಕರ ಭಟ್ ಕಲ್ಲಡ್ಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು