News Kannada
Friday, March 24 2023

ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯ ಮಾದರಿಯಲ್ಲಿಯೇ ರಾಜ್ಯದೆಲ್ಲೆಡೆ ಕಡತ ಅಭಿಯಾನ: ಆರ್.ಅಶೋಕ್

Photo Credit :

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಾದರಿಯಲ್ಲಿಯೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಡತ ವಿಲೇವಾರಿ ಅಭಿಯಾನ ನಡೆಸಲಾಗುವುದು. ತಾನು ಖುದ್ದಾಗಿ ಅಭಿಯಾನದಲ್ಲಿ ಭಾಗವಹಿಸುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಕಡತ ವಿಲೇವಾರಿ ಸಪ್ತಾಹಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇದೇ ಸಂದರ್ಭ ಸಾಂಕೇತಿಕವಾಗಿ ಕಡತ ವಿಲೇವಾರಿ ನಡೆಸಿ ಫಲಾನುಭವಿಗಳಿಗೆ ವಿವಿಧ ಸೌಲಭ್ಯ ಹಸ್ತಾಂತರಿಸಲಾಯಿತು.

ಜನತೆಯ ಯಾವುದೇ ಅರ್ಜಿಗಳು ಧೀರ್ಘಕಾಲ ಪೆಂಡಿಂಗ್ ಉಳಿಯಬಾರದು ಎಂಬ ನಿಟ್ಟಿನಲ್ಲಿ ಆದ್ಯತೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆಯನ್ನೂ ನೀಡಲಾಗಿದೆ. ಪೆಂಡಿಂಗ್ ಇರುವ ಪಿಂಚಣಿ ಸಮಸ್ಯೆಯನ್ನು ಕೂಡ ಶೀಘ್ರ ಬಗೆಹರಿಸಲಾಗುವುದು. ಜನರ ಸಮಸ್ಯೆ ಬಗೆಹರಿಸಲೆಂದೇ ಎಲ್ಲಾ ಜಿಲ್ಲೆಗಳಲ್ಲಿ ಸ್ವತಃ ಜಿಲ್ಲಾಧಿಕಾರಿಗಳು ಗ್ರಾಮೀಣ ಭಾಗಕ್ಕೆ ತೆರಳಿ ಜನತೆಯ ಸಮಸ್ಯೆ ಆಲಿಸಿ ಸ್ಪಂದಿಸುತ್ತಿದ್ದಾರೆ. ಯುವುದೇ ಸಿಂಗಲ್ ಅರ್ಜಿ ಪೆಂಡಿಂಗ್ ಉಳಿಯದಂತೆ ಒತ್ತು ನೀಡಲಾಗಿದೆ ಎಂದು ಆರ್.ಅಶೋಕ್ ಹೇಳಿದರು.

ಕುಮ್ಕಿ, ಕಾನ, ಬಾಣೆ ಇತ್ಯಾದಿ ಸಮಸ್ಯೆ ಸರಿಪಡಿಸಲು ಈಗಾಗಲೇ ಕಂದಾಯ ಸಚಿವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಕುಮ್ಕಿ ಜಮೀನು ಸಂಘ ಸಂಸ್ಥೆಗಳಿಗೆ ನೀಡುವ ಯಾವುದೇ ಪ್ರಸ್ತಾವನೆ ಸರಕಾರದ ಮುಂದಿಲ್ಲ. ಈ ಜಮೀನನ್ನು ರೈತರಿಗೆ ನೀಡಿ ನ್ಯಾಯ ಒದಗಿಸಲಾಗುವುದು ಎಂದವರು ಹೇಳಿದರು.

See also  ಬಂಟ್ವಾಳ: ತಾಳೆ ಮರದಿಂದ ಬಿದ್ದು ವ್ಯಕ್ತಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು