News Kannada
Saturday, March 25 2023

ಮಂಗಳೂರು

ಗಂಡ-ಹೆಂಡತಿ ವೈಮನಸ್ಸಿನ ಸಂದರ್ಭ ಮಧ್ಯಪ್ರವೇಶಿಸಿದ ಹಲ್ಲೆಯಾದ ವ್ಯಕ್ತಿ ಸಾವು

Photo Credit : News Kannada

ಬಂಟ್ವಾಳ:ಕ್ಷುಲ್ಲಕ ಕಾರಣಕ್ಕಾಗಿ ಗಂಡ-ಹೆಂಡತಿ ವೈಮನಸ್ಸಿನ ಸಂದರ್ಭ ಮಧ್ಯಪ್ರವೇಶಿಸಿದ ಬಾವನಿಂದ ಹಲ್ಲೆಗೊಳಗಾದ ವ್ಯಕ್ತಿ ಸಾವನ್ನಪ್ಪಿದ್ದು, ಆರೋಪಿ ಬಾವನನ್ನು ಪೊಲೀಸರು ಬಂಧಿಸಿದ್ದಾರೆ

ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಬರಮೇಲು ನಿವಾಸಿ ಕೇಶವ ಪೂಜಾರಿ(47)ಮೃತಪಟ್ಟವರಾಗಿದ್ದು, ಅವರ ಬಾವ  ಮಣಿನಾಲ್ಕೂರು ಗ್ರಾಮದ ಅಶೋಕ್ ಯಾನೆ ಚಂದಪ್ಪ (45) ಪೂಜಾರಿಗೆ ಬಂಧಿತ ಆರೋಪಿಯಾಗಿದ್ದಾನೆ.

ಕೇಶವ ಪೂಜಾರಿ ಮಂಗಳೂರಿನ ಹೊಟೇಲ್‌ನಲ್ಲಿ ಅಡಿಗೆ ಕೆಲಸ ಮಾಡುತ್ತಿದ್ದು,  ಕಳೆದ ಜ.೩೧ರಂದು ಮನೆಗೆ ಬಂದ ಅವರು ಸಂಬಳದ ಹಣವನ್ನು ಪತ್ನಿ ಪ್ರೇಮಾ ಅವರಲ್ಲಿ ನೀಡಿದ್ದಾರೆ. ಬಳಿಕ ನೂರು ರೂಪಾಯಿ ಕೇಳಿದ್ದಾರೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಪ್ರೇಮಾ ಅವರು ಈ ವಿಚಾರವನ್ನು  ತನ್ನ ಅಣ್ಣ ಅಶೋಕ್ ಯಾನೆ ಚಂದಪ್ಪ ಪೂಜಾರಿಗೆ ತಿಳಿಸಿದ್ದಾರೆ. ಮನೆಗೆ ಬಂದ ಅಶೋಕ್ ಯಾನೆ ಚಂದಪ್ಪ ಪೂಜಾರಿ ಕೇಶವ ಪೂಜಾರಿ ಅವರಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಗಂಭೀರ ಗಾಯಗೊಂಡಿದ್ದ ಕೇಶವ ಪೂಜಾರಿಗೆ ವಿಪರೀತ ಎದೆನೋವು ಕಾಣಿಸಿಕೊಂಡಿದೆ. ತತ್‌ಕ್ಷಣ ಅವರನ್ನು ತಾಯಿ ಲೀಲಾ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಔಷಧಿ ಪಡೆದು, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಕೇಶವ ಪೂಜಾರಿ ಅವರಿಗೆ ಫೆ.8ರಂದು  ತೀವ್ರ ಅನಾರೋಗ್ಯ ಕಾಣಿಸಿಕೊಂಡಿದೆ.ಮನೆಮಂದಿ   ಅವರನ್ನು ಬಂಟ್ವಾಳ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ನೆರೆಹೊರೆಯವರು ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಶಿವಕುಮಾರ್ ಅವರಿಗೆ ಮಾಹಿತಿ ನೀಡಿದ್ದಾರೆ. ಅವರು ಪುಂಜಾಲಕಟ್ಟೆ ಪೊಲೀಸರಿಗೆ ಮಾಹಿತಿ ನೀಡಿ ಶವಪರೀಕ್ಷೆ ಮಾಡಿಸಲು ಸೂಚಿಸಿದ್ದಾರೆ. ಅದರಂತೆ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಮೃತದೇಹದ ಶವಪರೀಕ್ಷೆ ಮಾಡಿಸಿದಾಗ ಹಲ್ಲೆಯಿಂದ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂಬುವುದು ತಿಳಿದುಬಂದಿದೆ.

ಪ್ರಕರಣ ದಾಖಲಿಸಿಕೊಂಡ ಸಿಐ ಶಿವಕುಮಾರ್ ಮತ್ತು ತಂಡ ಆರೋಪಿಯನ್ನು ಫೆ.೨೧ರಂದು ಮಂಗಳೂರಿನ ಬಜಪೆ ವ್ಯಾಪ್ತಿಯ ಹೊಟೇಲ್‌ನಲ್ಲಿ ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದು, ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ
See also  ಖಾಸಗಿ ಚಿತ್ರ ತೆಗೆದು ಬ್ಲಾಕ್ ಮೇಲ್, ವ್ಯಕ್ತಿಯನ್ನು ಹತ್ಯೆ ಮಾಡಿಸಿದ ವಿದ್ಯಾರ್ಥಿನಿಯರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು