News Kannada
Wednesday, September 27 2023
ಮಂಗಳೂರು

ಬೆಳ್ತಂಗಡಿ: ಅಭಿನಯ ಕಾರ್ಯಾಗಾರ ಸಮಾರಂಭ

Untitled 1 48
Photo Credit :

ಬೆಳ್ತಂಗಡಿ: ಪ್ರಾಯೋಗಿಕ ಜ್ಞಾನವನ್ನು ಅನ್ವಯಿಸಿಕೊಳ್ಳುವ ಸಾಮಥ್ರ್ಯದೊಂದಿಗೆ ನಿರಂತರ ಕಲಿಕೆಯ ಶ್ರದ್ಧೆಯಿದ್ದರೆ ಕಲಾರಂಗದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡು ಸಾಧಿಸಲು ಸಾಧ್ಯವಾಗುತ್ತದೆ ಎಂದು ‘ಪಡ್ಡಾಯಿ’ ಸಿನಿಮಾ ಖ್ಯಾತಿಯ ನಟಿ ಬಿಂದುಶ್ರಿ ರಕ್ಷಿದಿ ಎ.ಯು ಹೇಳಿದರು.

ಉಜಿರೆಯ ಎಸ್.ಡಿ.ಎಂ ಕಾಲೇಜಿನ ಸಿದ್ಧವನ ಗುರುಕುಲದಲ್ಲಿ ಎಸ್.ಡಿ.ಎಂ ಕಾಲೇಜಿನ ಬಿ.ವೋಕ್ ಡಿಜಿಟಲ್ ಮೀಡಿಯಾ – ಫಿಲ್ಮ್ ಮೇಕಿಂಗ್ ವಿಭಾಗವು ಆಯೋಜಿಸಿದ ಒಂದು ವಾರದ ‘ಅಭಿನಯ ಕಾರ್ಯಾಗಾರ’ದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿದರು.

ಒಬ್ಬ ಕಲಾವಿದನಿಗೆ ಪ್ರಾಯೋಗಿಕ ಜ್ಞಾನ ಅತ್ಯಗತ್ಯ. ನಿರಂತರ ಪ್ರಯತ್ನ ಮತ್ತು ಸೂಕ್ಷ್ಮ ಗಮನ ನಟರನ್ನು ಗಟ್ಟಿಗೊಳಿಸುತ್ತದೆ. ಅಷ್ಟೇ ಅಲ್ಲ, ರಂಗಭೂಮಿ ಬದುಕಿನ ವಿವಿಧ ಮಜಲುಗಳನ್ನು ಯಶಸ್ವಿಯಾಗಿ ನಿಭಾಯಿಸುವ ಭರವಸೆ ಮೂಡಿಸುತ್ತದೆ. ಬಿಕ್ಕಟ್ಟಿನ ಸಂದರ್ಭಗಳಲ್ಲೂ ವಿಚಲಿತಗೊಳ್ಳದೇ ಮುನ್ನಡೆಯುವ ಶಕ್ತಿ ನೀಡುತ್ತದೆ ಎಂದರು.

ಸಿನಿಮಾ ಎಂದರೆ ಕೇವಲ ಅಭಿನಯ ಮಾತ್ರವಲ್ಲ. ವಿವಿಧ ರೀತಿಯ ಕಲಿಕೆಯ ಸಾಧ್ಯತೆಗಳು ಸಿನಿಮಾ ಮತ್ತು ರಂಗಭೂಮಿ ವಲಯಗಳಲ್ಲಿರುತ್ತವೆ. ಇಂಥ ಕಲಿಕೆಯ ಅವಕಾಶವನ್ನು ಅಭಿನಯ ಕಾರ್ಯಾಗಾರ ಒದಗಿಸಿಕೊಡುತ್ತದೆ ಎಂದು ಹವ್ಯಾಸಿ ಕಲಾವಿದ ಸುಬ್ರಹ್ಮಣ್ಯ ಜಿ.ಭಟ್ ಹೇಳಿದರು.ಕ್ರಿಯಾತ್ಮಕ ಜಗತ್ತಿನಲ್ಲಿ ಅತಿಯಾದ ಮಾತಿಗಿಂತ ಕೆಲಸಕ್ಕೇ ಹೆಚ್ಚಿನ ಆದ್ಯತೆ. ಅವಕಾಶಗಳನ್ನು ಸದುಪಯೋಗಪಡಿಸಿಕೊಂಡರೆ ಯಶಸ್ಸು ನಮ್ಮದಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿ.ವೋಕ್ ವಿಭಾಗದ ಮುಖ್ಯಸ್ಥ ಮಾಧವ ಹೊಳ್ಳ, ಕಾರ್ಯಗಾರ ಸಂಚಾಲಕಿ ಅಶ್ವಿನಿ ಜೈನ್, ನಟ ನವೀನ್ ಸಾಣೆಹಳ್ಳಿ ಹಾಗೂ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಮುರಾರಿ ವಂದಿಸಿ, ಗೌತಮ್ ಕಾರ್ಯಕ್ರಮ ನಿರೂಪಿಸಿದರು.

See also  ಕಾಡಂಚಿನ ಗ್ರಾಮಗಳಲ್ಲಿ ಚಿರತೆ ಹಾವಳಿ: ಹಸು ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು